Webdunia - Bharat's app for daily news and videos

Install App

ಮೊಮ್ಮಗನ ಸ್ಪರ್ಧೆಗೆ ದೇವೇಗೌಡರ ಕುಟುಂಬದಲ್ಲೇ ಭಿನ್ನಮತ?

Webdunia
ಮಂಗಳವಾರ, 7 ನವೆಂಬರ್ 2017 (09:15 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಚ್. ಡಿ. ರೇವಣ್ಣ ಪುತ್ರ ಪ್ರಜ್ವಲ್ ಗೌಡ ಸ್ಪರ್ಧೆ ಬಗ್ಗೆ ಕುಟುಂಬದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬುದು ಖಚಿತವಾಗಿದೆ.

 
ಪ್ರಜ್ವಲ್ ಸ್ಪರ್ಧಿಸುತ್ತಾರೆ. ಅವರ ಸ್ಪರ್ಧೆಗೆ ತಾತ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಸಿರು ನಿಶಾನೆ ತೋರಿದ್ದಾರೆ ಎಂದು ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಹೇಳಿದ ಕೆಲ ಹೊತ್ತಿನಲ್ಲೇ ಜೆಡಿಸ್ ರಾಜ್ಯಾಧ್ಯಕ್ಷ, ಪ್ರಜ್ವಲ್ ಚಿಕ್ಕಪ್ಪ ಕುಮಾರಸ್ವಾಮಿ ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.

ಹೊಳೆನರಸೀಪುರ ತಾಲೂಕಿನ ಈಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ಭವಾನಿ ರೇವಣ್ಣ ಪ್ರಜ್ವಲ್, ಬೇಲೂರು ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದ್ದಾನೆ. ಯಾವ ಕ್ಷೇತ್ರದಲ್ಲಿ ಕಣಕ್ಕಿಳಿಯಬೇಕೆಂದು ದೇವೇಗೌಡರು ತೀರ್ಮಾನಿಸುತ್ತಾರೆ ಎಂದಿದ್ದಾರೆ.

ಆದರೆ ಅದೇ ದೇವಾಲಯಕ್ಕೆ ಕೆಲವೇ ಹೊತ್ತಿನ ನಂತರ ಬಂದ ಕುಮಾರಸ್ವಾಮಿ, ಮುಂದಿನ ಚುನಾವಣೆಯಲ್ಲಿ ರೇವಣ್ಣ ಮತ್ತು ಕುಮಾರಸ್ವಾಮಿ ಮಾತ್ರ ಸ್ಪರ್ಧಿಸುತ್ತಾರೆಂದು ದೇವೇಗೌಡರೇ ಹೇಳಿದ್ದಾರೆ. ಮುಂದೆ ಏನಾಗುತ್ತದೆಂದು ಹೇಳಲಾಗದು ಎನ್ನುವ ಮೂಲಕ ಪ್ರಜ್ವಲ್ ಸ್ಪರ್ಧೆ ಬಗ್ಗೆ ಗೊಂದಲ ಮೂಡಿಸುವ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments