ಸದನದಲ್ಲಿ ಸ್ವಾರಸ್ಯಕರ ಚರ್ಚೆ: ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪಿಶಾಚಿ ಅಂತೆ...!

Webdunia
ಗುರುವಾರ, 16 ನವೆಂಬರ್ 2017 (16:41 IST)
ವಿಧಾನಸಭೆಯಲ್ಲಿ ನಡೆದ ಮೌಢ್ಯ ಪ್ರತಿಬಂಧಕ ಮಸೂದೆ ಜಾರಿ ಚರ್ಚೆಯಲ್ಲಿ ಹಲವು ಸ್ವಾರಸ್ಯಕರ ವಿಷಯಗಳು ಸದನವನ್ನು ನಗೆಗಡಲಲ್ಲಿ ತೇಲಿಸಿದವು.
ಕಾರಿನ ಮೇಲೆ ಕಾಗೆ ಕುಳಿತಿರುವುದಕ್ಕೆ ಕಾರು ಬದಲಾಯಿಸಿದ್ದೀರಲ್ಲ ಅದು ಮೂಢನಂಬಿಕೆಯೋ ಅಥವಾ ನಂಬಿಕೆಯೋ ಎಂದು ಶಾಸಕ ಸಿ.ಟಿ. ರವಿ, ಸಿಎಂ ಸಿದ್ದರಾಮಯ್ಯರನ್ನು ಪ್ರಶ್ನಿಸಿದಾಗ, ಸಿಎಂ ನಾನು ಮೊದಲ ಕಾರು ಬದಲಾಯಿಸಬೇಕು ಎಂದು ಕೊಂಡಿದ್ದೆ. ಕಾಗೆ ಕುಳಿತಿದೆ ಎಂದು ಕಾರು ಬದಲಾಯಿಸಿಲ್ಲ ಎಂದು ತಿರುಗೇಟು ನೀಡಿದರು.
 
ರವಿ ನೀನು ನನ್ನ ಕಾರಿನ ಮೇಲೆ 20 ಕಾಗೆಗಳನ್ನು ತಂದು ಕೂರಿಸಿ ನಾನು ಕಾರು ಬದಲಾಯಿಸುವುದಿಲ್ಲ ಎಂದು ಸಿಎಂ ಸವಾಲ್ ಹಾಕಿದರು. ಮತ್ತೆ ಹಿಂದೆ ಇದೊಂದು ಪೈಶಾಚಿಕ ಕೃತ್ಯ ಎಂದೆಲ್ಲಾ ಹೇಳಿದ್ರಿ, ಪಿಶಾಚಿಗಳು ಅಂದ್ರೆ ಹೇಗಿರುತ್ತವೆ ಎಂದು ಪ್ರಶ್ನಿಸಿದರು.
 
ಸಿಎಂ ಪದೇ ಪದೇ ದೆವ್ವ, ಭೂತ, ಪಿಶಾಚಿ ಎನ್ನುತ್ತಿರುತ್ತಾರೆ. ದೆವ್ವ ಪಿಶಾಚಿಗಳು ಹೇಗಿರುತ್ತವೆ. ಅವುಗಳ ರಕ್ತ ಕೆಂಪೋ ಅಥವಾ ಬಿಳಿಯೋ, ಕಾಲುಗಳು ಹೇಗಿರುತ್ತವೆ ಎಂದು ಶಾಸಕ ರವಿ, ಮತ್ತೆ ಸಿಎಂ ರನ್ನು ಕಿಚಾಯಿಸಿದರು.
 
ಶಾಸಕ ಸಿ.ಟಿ.ರವಿ ಮತ್ತು ಸಿಎಂ ಸಿದ್ದರಾಮಯ್ಯ ಮಾತಿನ ಮಧ್ಯೆ ಪ್ರವೇಶಿಸಿದ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ, ಕೆ.ಎಸ್.ಈಶ್ವರಪ್ಪರನ್ನು ನೋಡಿದ್ರೆ ಗೊತ್ತಾಗಲ್ವ ಎಂದು ಗೇಲಿ ಮಾಡಿದರು. ರಾಯರೆಡ್ಡಿ ಹೇಳಿಕೆಗೆ ಸದನವೇ ನಗೆಗಡಲಲ್ಲಿ ತೇಲಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments