Webdunia - Bharat's app for daily news and videos

Install App

ವಿಪಕ್ಷ ನಾಯಕರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ;ಬೊಮ್ಮಾಯಿ

Webdunia
ಶನಿವಾರ, 23 ಅಕ್ಟೋಬರ್ 2021 (13:07 IST)
ಹಾವೇರಿ : ಚುನಾವಣಾ ಪ್ರಚಾರಕ್ಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಹಾನಗಲ್ಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಬೊಮ್ಮಾಯಿ, ವಿಪಕ್ಷ ನಾಯಕರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ.
ಅವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಅಂತ ಹೇಳಿಕೆ ನೀಡಿದರು. ಇನ್ನು ಸಿಎಂ ಬೊಮ್ಮಾಯಿ, ಬಿಎಸ್ವೈ ಜಂಟಿ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜ್ಯದ ಮುಖ್ಯಮಂತ್ರಿ, ಕಾಂಗ್ರೆಸ್ನಲ್ಲಿ ಡಿಕೆಶಿ, ಸಿದ್ದರಾಮಯ್ಯರಿಂದ ಜಂಟಿ ಪ್ರಚಾರ ಮಾಡುತ್ತಿಲ್ವಾ? ಅಂತ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ, ಹೆಚ್ಡಿ ಕುಮಾರಸ್ವಾಮಿ ಪಂಥಾಹ್ವಾನ ವಿಚಾರದ ಬಗ್ಗೆ ಮಾತನಾಡಿದ ಅವರು, ಅವರದು ಮಾತಿನ ಮಂಟಪ ಎಂದು ತಿರುಗೇಟು ನೀಡಿದ್ದಾರೆ. ವಿಧಾನಸೌಧದ ವೇದಿಕೆಯೇ ದೊಡ್ಡ ಅಖಾಡ. ವಿಧಾನಸೌಧದಲ್ಲಿಯೇ ಬಹಿರಂಗ ಚರ್ಚೆ ಮಾಡಲಿ. ನಾವು ಮಾಡಿದ್ದನ್ನು ನಿನ್ನೆಯೇ ದಾಖಲೆ ಸಮೇತ ಹೇಳಿದ್ದೇನೆ. ಕೆಲವು ಊರುಗಳ ಹೆಸರನ್ನು ಕೂಡ ಉಲ್ಲೇಖಿಸಿದ್ದೇನೆ. ವಿಪಕ್ಷದವರು ಅಲ್ಲಿಗೆ ಹೋಗಿ ನೋಡಿಕೊಂಡು ಬರಲಿ ಅಂತ ಹಾನಗಲ್ನಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments