Webdunia - Bharat's app for daily news and videos

Install App

ನನ್ನ ಭಾಮೈದ ತಂಗಿಗೆ ಅಂತ ಅರಿಶಿನ ಕುಂಕುಮಕ್ಕೆ ಸೈಟು ಕೊಟ್ಟರೆ ವಿವಾದ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

Krishnaveni K
ಮಂಗಳವಾರ, 22 ಅಕ್ಟೋಬರ್ 2024 (16:32 IST)
ಮೈಸೂರು: ನನ್ನ 42 ವರ್ಷದ ಸುದೀರ್ಘ ರಾಜಕಾರಣದಲ್ಲಿ ಎಂದಿಗೂ ಬಡವರಿಗೆ ಅನ್ಯಾಯ ಮಾಡಿಲ್ಲ, ಒಂದೇ ಒಂದು ರೂಪಾಯಿ ಲಂಡವೂ ಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ವರುಣಾದಲ್ಲಿ ಅಬ್ಬರಿಸಿದ್ದಾರೆ.

ನನ್ನ ಮೇಲೆ ಈಗ ಬಂದಿರುವ ಆರೋಪಗಳನ್ನು ಸಹಿಸುತ್ತೀರಾ ಎಂದು ತಮ್ಮ ಕ್ಷೇತ್ರದ ಜನರಿಗೆ ಪ್ರಶ್ನೆ ಮಾಡಿದ್ದಾರೆ. ವರುಣಾದಲ್ಲಿ ಇಂದು 501 ಕೋಟಿ ರೂ.ಗಳ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಮ್ಮ ರಾಜಕೀಯ ಜೀವನ ಸ್ವಚ್ಛವಾಗಿದೆ ಎಂದಿದ್ದಾರೆ.

ಸಾರ್ವಜನಿಕರಿಂದ ಹಣ ತೆಗೆದುಕೊಂಡಿದ್ದರೆ 9 ಚುನಾವಣೆ ಗೆಲ್ಲಲು ಸಾಧ್ಯವಾಗುತ್ತಿತ್ತಾ? ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ಯಾರು ಬೇಕಾದರೂ ಓದಬಹುದು. ನನ್ನ ಭಾಮೈದ ತಂಗಿಗೆ ಅರಿಶಿನ ಕುಂಕುಮಕ್ಕೆ ಕೊಟ್ಟ ಜಮೀನನ್ನೇ ವಿವಾದ ಮಾಡಿದರು. ಅದಕ್ಕೇ ನಿವೇಶನವನ್ನೇ ವಾಪಸ್ ಮಾಡಿದೆವು. 40 ವರ್ಷದಿಂದ ಶಾಸಕನಾಗಿದ್ದರೂ ನನಗೆ ಸ್ವಂತ ಮನೆಯಿಲ್ಲ. ಮೈಸೂರಿನಲ್ಲಿ ಮರಿಸ್ವಾಮಿ ಎಂಬವರ ಮನೆಯಲ್ಲಿದ್ದೇವೆ.  ಈಗಷ್ಟೇ ಸ್ವಂತ ಮನೆ ಕಟ್ಟಿಸುತ್ತಿದ್ದೇನೆ. ನೀವೇ ನನ್ನ ಮಾಲಿಕರು,ನೀವೇ ಯಜಮಾನರು, ನೀವೇ ಮಾತನಾಡಿ’ ಎಂದು ಸಿಎಂ ಹೇಳಿದ್ದಾರೆ.

ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿಯವರಿಗೆ ನನ್ನ ಕಂಡರೆ ಹೊಟ್ಟೆ ಉರಿ. ಅದಕ್ಕೇ ಸುಳ್ಳು ಆರೋಪ ಮಾಡುತ್ತಿದ್ದಾರೆ. ಆದರೆ ಅದಕ್ಕೆಲ್ಲಾ ಜಗ್ಗುವನನಲ್ಲ ನಾನು. ಕಾಯಾ ವಾಚಾ ಮನಸಾ ರಾಜಕಾರಣ ಮಾಡಿದ್ದೇನೆ. ನಾನು ಇರುವವರೆಗೂ ಬಡವರಿಗೆ ನ್ಯಾಯ ಒದಗಿಸುತ್ತೇನೆ’ ಎಂದು ವರುಣಾದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments