Webdunia - Bharat's app for daily news and videos

Install App

ಸಂಪುಟ ವಿಳಂಬಕ್ಕೆ ವಿಪಕ್ಷಗಳ ಆಕ್ರೋಶ : ಕರ್ನಾಟಕಕ್ಕೆ ಅಂಟಿದ ಶಾಪ ಎಂದ HDK

Webdunia
ಶನಿವಾರ, 31 ಜುಲೈ 2021 (09:02 IST)
ರಾಮನಗರ/ಹುಬ್ಬಳ್ಳಿ (ಜು.31): ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದರೂ ಸಚಿವ ಸಂಪುಟ ವಿಸ್ತರಣೆ ವಿಳಂಬ ಹಾಗೂ ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಲಾಬಿ ಕುರಿತು ಪ್ರತಿಪಕ್ಷ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

•ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ
•ಸಂಪುಟ ವಿಸ್ತರಣೆ ವಿಳಂಬಕ್ಕೆ ಅಸಮಾಧಾನ ಹೊರಹಾಕಿದ ವಿಪಕ್ಷಗಳು
•ಇದೊಂದು ಕರ್ನಾಟಕಕ್ಕೆ ಅಂಟಿದ ಶಾಪ ಎಂದ ಎಚ್ಡಿಕೆ
ಬಿಜೆಪಿಯಲ್ಲಿ ಸಂಪುಟ ರಚನೆ ವಿಳಂಬವಾಗುತ್ತಿರುವುದು ಕರ್ನಾಟಕಕ್ಕೆ ಅಂಟಿದ ಶಾಪ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರೆ, ನೆರೆ ಹಾವಳಿಯಿಂದ ಜನ ಸಂಕಷ್ಟದಲ್ಲಿದ್ದರೂ ಯಾರೂ ಕೇಳುವವರಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ಎರಡು ದಿನವಾದರೂ ಇನ್ನೂ ಸಚಿವ ಸಂಪುಟ ರಚನೆ ಆಗಿಲ್ಲ. ರಾಜ್ಯವು ಪ್ರವಾಹ, ಕೋವಿಡ್ನಿಂದ ಕಂಗೆಟ್ಟಿರುವ ಈ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಏಕಾಂಗಿಯಾಗಿ ಕಾರ್ಯನಿರ್ವಹಿಸಬೇಕಿದೆ. ಈ ಬಗ್ಗೆ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಇದೀಗ ಮತ್ತೊಮ್ಮೆ ಸಂಪುಟ ರಚನೆ ವಿಳಂಬ ಕುರಿತು ಕಿಡಿಕಾರಿವೆ.
ಎಚ್ಡಿಕೆ ಹೇಳಿದ್ದೇನು?:  ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ಹಲವು ಸಮಯ ಏಕಾಂಗಿಯಾಗಿ ಕೆಲಸ ಮಾಡಿದ್ದರು. ಈಗ ಬಸವರಾಜ ಬೊಮ್ಮಾಯಿ ಅವರಿಗೂ ಅದೇ ಸ್ಥಿತಿ ಬಂದಿದೆ. ಇದು ಕನ್ನಡ ನಾಡಿನ ದುರಾದೃಷ್ಟಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ರಚನೆ ಬಸವರಾಜ ಬೊಮ್ಮಾಯಿ ಪಾಲಿಗೆ ಸವಾಲಿನ ಕೆಲಸ. ಅವರು ದೆಹಲಿ ವರಿಷ್ಠರೊಂದಿಗೆ ಚರ್ಚಿಸಿ, ಬಿಜೆಪಿ ಶಾಸಕರ ಮನವೊಲಿಸಿ ಸಮಸ್ಯೆಗೆ ಅವಕಾಶ ನೀಡದಂತೆ ಆದಷ್ಟುಬೇಗ ಸಂಪುಟ ರಚನೆ ಮಾಡಲಿ. ನೆರೆ ಹಾವಳಿ ಹಾಗೂ ಕೋವಿಡ್ ನಿಯಂತ್ರಣದತ್ತ ಗಮನ ಹರಿಸಲಿ ಎಂದು ಸಲಹೆ ನೀಡಿದ್ದಾರೆ.
ಈ ಮಧ್ಯೆ, ಡಿ.ಕೆ.ಶಿವಕುಮಾರ್ ಮಾತ್ರ ನೆರೆಯಿಂದ ಜನ ಸಂಕಷ್ಟಅನುಭವಿಸುತ್ತಿದ್ದರೂ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವೇ ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಹಾಗೂ ಬಿಜೆಪಿಯವರಿಗೆ ಜನಹಿತ ಬೇಕಾಗಿಲ್ಲ. ಬದಲಿಗೆ ಅಧಿಕಾರ ಬೇಕಾಗಿದೆ. ಬಿಜೆಪಿಯವರು ಬಹಳ ಆತುರದಲ್ಲಿದ್ದಾರೆ. ಅವರಿಗೆ ಜನಪರ ಕಾಳಜಿಯೇ ಇಲ್ಲ. ವಲಸಿಗ ಶಾಸಕರು ಸೇರಿ ಹಲವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿ ಸೇರಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments