Webdunia - Bharat's app for daily news and videos

Install App

ಕನ್ನಡ ಶಾಲೆ ಕಟ್ಟಡಕ್ಕೆ ಮರಾಠಿ ಭಾಷಿಕರ ವಿರೋಧ!

Webdunia
ಗುರುವಾರ, 31 ಜನವರಿ 2019 (18:29 IST)
ಕನ್ನಡ ಶಾಲೆಯ ಕಟ್ಟಡ ನಿರ್ಮಾಣಕ್ಕಾಗಿ ಅಗೆಯಲಾಗಿದ್ದ ಎರಡು ಕೊಠಡಿಗಳ ಅಡಿಪಾಯವನ್ನು ರಾತ್ರೋರಾತ್ರಿ ಮುಚ್ಚಿಸಿರುವ ಘಟನೆ ನಡೆದಿದೆ.    

ಮರಾಠಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ರಾತ್ರೋರಾತ್ರಿ ಅಡಿಪಾಯ ಮುಚ್ಚಿಸಿದ್ದಾರೆ. ಮಹಾರಾಷ್ಟ್ರ - ಕರ್ನಾಟಕ ಗಡಿಯ ಮಾನಕಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗಡಿ ಗ್ರಾಮ ಮಾನಕಾಪುರದಲ್ಲಿ ಕನ್ನಡ ಶಾಲೆ‌ ವಿದ್ಯಾರ್ಥಿಗಳ ಅನುಕೂಲಕ್ಕೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಎರಡು ಕೊಠಡಿ ಮಂಜೂರು ಮಾಡಿಸಿದ್ದರು.  ಕಟ್ಟಡ ನಿರ್ಮಾಣಕ್ಕೆ ಎಸ್.ಡಿ.ಎಂ.ಸಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಒಂದೇ ಆವರಣದಲ್ಲಿರುವ ಕನ್ನಡ ಹಾಗೂ ಮರಾಠಿ ಶಾಲೆ ಬೇಡ. ಮಾರಾಠಿ ಶಾಲೆ ಆವರಣದಲ್ಲಿ ಕನ್ನಡ ಶಾಲೆ ಬೇಡ ಎಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ.

ಎಸ್. ಡಿ.ಎಂ.ಸಿ ಸದಸ್ಯರ ನಡೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್. ಡಿ.ಎಂ.ಸಿ ಸದಸ್ಯರ ನಡೆ ಖಂಡಿಸಿ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಮಾನಕಾಪುರ ಗ್ರಾಮ ಪಂಚಾಯತಿ ಎದುರು ವಿಧ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಈ ಹಿಂದೆ ಕನ್ನಡ ಶಾಲೆಗೆ ಸೇರಿಸದಂತೆ ಮರಾಠಿ ಶಿಕ್ಷಕರಿಂದ ಪಾಲಕರಿಗೆ ಒತ್ತಾಯ ಮಾಡಲಾಗಿತ್ತು. ಈ ಒತ್ತಾಯದ ನಡುವೆಯೂ ಕನ್ನಡ ಶಾಲೆಗೆ ಮಕ್ಕಳನ್ನು ಪಾಲಕರು ಸೇರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments