Webdunia - Bharat's app for daily news and videos

Install App

ಕನ್ನಡ ಶಾಲೆ ಕಟ್ಟಡಕ್ಕೆ ಮರಾಠಿ ಭಾಷಿಕರ ವಿರೋಧ!

Webdunia
ಗುರುವಾರ, 31 ಜನವರಿ 2019 (18:29 IST)
ಕನ್ನಡ ಶಾಲೆಯ ಕಟ್ಟಡ ನಿರ್ಮಾಣಕ್ಕಾಗಿ ಅಗೆಯಲಾಗಿದ್ದ ಎರಡು ಕೊಠಡಿಗಳ ಅಡಿಪಾಯವನ್ನು ರಾತ್ರೋರಾತ್ರಿ ಮುಚ್ಚಿಸಿರುವ ಘಟನೆ ನಡೆದಿದೆ.    

ಮರಾಠಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ರಾತ್ರೋರಾತ್ರಿ ಅಡಿಪಾಯ ಮುಚ್ಚಿಸಿದ್ದಾರೆ. ಮಹಾರಾಷ್ಟ್ರ - ಕರ್ನಾಟಕ ಗಡಿಯ ಮಾನಕಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗಡಿ ಗ್ರಾಮ ಮಾನಕಾಪುರದಲ್ಲಿ ಕನ್ನಡ ಶಾಲೆ‌ ವಿದ್ಯಾರ್ಥಿಗಳ ಅನುಕೂಲಕ್ಕೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಎರಡು ಕೊಠಡಿ ಮಂಜೂರು ಮಾಡಿಸಿದ್ದರು.  ಕಟ್ಟಡ ನಿರ್ಮಾಣಕ್ಕೆ ಎಸ್.ಡಿ.ಎಂ.ಸಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಒಂದೇ ಆವರಣದಲ್ಲಿರುವ ಕನ್ನಡ ಹಾಗೂ ಮರಾಠಿ ಶಾಲೆ ಬೇಡ. ಮಾರಾಠಿ ಶಾಲೆ ಆವರಣದಲ್ಲಿ ಕನ್ನಡ ಶಾಲೆ ಬೇಡ ಎಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ.

ಎಸ್. ಡಿ.ಎಂ.ಸಿ ಸದಸ್ಯರ ನಡೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್. ಡಿ.ಎಂ.ಸಿ ಸದಸ್ಯರ ನಡೆ ಖಂಡಿಸಿ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಮಾನಕಾಪುರ ಗ್ರಾಮ ಪಂಚಾಯತಿ ಎದುರು ವಿಧ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಈ ಹಿಂದೆ ಕನ್ನಡ ಶಾಲೆಗೆ ಸೇರಿಸದಂತೆ ಮರಾಠಿ ಶಿಕ್ಷಕರಿಂದ ಪಾಲಕರಿಗೆ ಒತ್ತಾಯ ಮಾಡಲಾಗಿತ್ತು. ಈ ಒತ್ತಾಯದ ನಡುವೆಯೂ ಕನ್ನಡ ಶಾಲೆಗೆ ಮಕ್ಕಳನ್ನು ಪಾಲಕರು ಸೇರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments