Webdunia - Bharat's app for daily news and videos

Install App

ರಾಜಕೀಯ ದುರುದ್ದೇಶದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧ

Webdunia
ಮಂಗಳವಾರ, 7 ಸೆಪ್ಟಂಬರ್ 2021 (11:34 IST)
ಬೆಂಗಳೂರು : ಜಾತಿ ಗಣತಿ ವರದಿ ಬಿಡುಗಡೆಗೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗಗಳ ಆಯೋಗ ಕಾಂತರಾಜು ನೇತೃತ್ವದಲ್ಲಿ ನಡೆಸಿದ ಜಾತಿ ಗಣತಿ ವರದಿ ಬಿಡುಗಡೆ ಮಾಡಬಾರದು, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿ ಸಮೀಕ್ಷೆ ಹೆಸರಿನಲ್ಲಿ ನಡೆಸಲಾದ ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕವಾಗಿಲ್ಲ, ಸಮಗ್ರವಾಗಿಲ್ಲ ಎಂದು ದೂರಲಾಗಿದೆ.

ವೀರಶೈವ ಲಿಂಗಾಯಿತರಿಂದ ಉಪಜಾತಿಗಳನ್ನು ಉದ್ದೇಶಪೂರ್ವಕವಾಗಿ ಬೇರ್ಪಡಿಸಲಾಗಿದ್ದು, ಈ ವರದಿಯಿಂದ ವೀರಶೈವ ಲಿಂಗಾಯತರಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಹಿಂದುಳಿದವರಿಗೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರ ಸಂಖ್ಯೆ ನಮ್ಮಲ್ಲಿ ಹೆಚ್ಚಾಗಿದೆ. ಜಾತಿಗಣತಿ ಬಿಡುಗಡೆಯಿಂದ ಲಕ್ಷಾಂತರ ನಿರುದ್ಯೋಗಿ ಯುವಕರಿಗೆ, ಅವಕಾಶ ವಂಚಿತರಿಗೆ ಅನ್ಯಾಯವಾಗಲಿದೆ ಎಂದು ದೂರಲಾಗಿದೆ.
ಸಮೀಕ್ಷೆಯ ಅಂಶಗಳು ಸೋರಿಕೆಯಾಗಿವೆ. ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಬದಲು ಕೇವಲ ಜಾತಿವಾರು ಸಂಖ್ಯೆಯನ್ನು ವ್ಯವಸ್ಥಿತವಾಗಿ ಸೃಷ್ಟಿಸಲಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶವಿದ್ದು, ಜಾತಿ ಆಧಾರದ ಮೇಲೆ ಸಮಾಜ ಒಡೆಯುವ ಹುನ್ನಾರವಿದೆ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಮುಂದಿನ ಸುದ್ದಿ
Show comments