Webdunia - Bharat's app for daily news and videos

Install App

ರಾಜ್ಯಕ್ಕೆ ನೀರು ಬಿಡುಗಡೆಗೆ ವಿರೋಧ; ಮಹಾ ಸಿಎಂಗೆ ಪತ್ರ ಬರೆದ ಶಾಸಕ

Webdunia
ಶುಕ್ರವಾರ, 10 ಮೇ 2019 (17:11 IST)
ಕರ್ನಾಟಕ ರಾಜ್ಯಕ್ಕೆ ನೀರು ಬಿಡುಗಡೆ ವಿರೋಧಿಸಿ ಮುಖ್ಯಮಂತ್ರಿಗೆ ಶಾಸಕರೊಬ್ಬರು ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಗೆ ಶಿವಸೇನೆ ಶಾಸಕನಿಂದ ಪತ್ರ ಬರೆಯಲಾಗಿದೆ. ಸಿಎಂ ದೇವೇಂದ್ರ ಫಡ್ನವಿಸ್ ಗೆ ಪತ್ರ ಬರೆದಿದ್ದಾರೆ ಶಾಸಕ ಶಂಭುರಾಜ ದೇಸಾಯಿ.

ಶಾಸಕ ದೇಸಾಯಿ, ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಪಾಟಣ್ ಕ್ಷೇತ್ರದ ಶಾಸಕರಾಗಿದ್ದಾರೆ.
ಕೃಷ್ಣಾ ನದಿಗೆ ಕೊಯ್ನಾ ಡ್ಯಾಂ ನಿಂದ ನೀರು ಬಿಡುಗಡೆ ಮಾಡದಂತೆ ಪತ್ರ ಬರೆದಿದ್ದಾರೆ.
105 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯದ ಕೊಯ್ನಾ ಡ್ಯಾಂನಲ್ಲಿ ಪ್ರಸ್ತುತ 36.89 ಟಿಎಂಸಿ ನೀರು ಸಂಗ್ರಹವಿದೆ. ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯಲ್ಲಿರುವ ಡ್ಯಾಂ ಇದಾಗಿದೆ.

ಕೃಷ್ಣಾ ನದಿಗೆ 4 ಟಿಎಂಸಿ ನೀರು ಕೇಳಿದೆ ಕರ್ನಾಟಕ ಸರ್ಕಾರ.

ಕರ್ನಾಟಕದಲ್ಲಿ ಬತ್ತಿ ಬರಿದಾಗಿರೋ ಕೃಷ್ಣಾ ನದಿಗೆ ನೀರು ಹರಿಸುವಂತೆ ಕೋರಲಾಗಿದೆ. ರಾಜ್ಯದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೃಷ್ಣಾ ನದಿ ಹರಿಯುತ್ತದೆ.

ಮೇ 8 ರಂದು ಸಿಎಂ ಫಡ್ನವಿಸ್ ಗೆ ಪತ್ರ ಬರೆದಿರುವ ಶಾಸಕ ದೇಸಾಯಿ ಕ್ರಮಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments