Select Your Language

Notifications

webdunia
webdunia
webdunia
webdunia

ಇವಿಎಂ ಬಳಕೆಗೆ ತೀವ್ರಗೊಂಡ ವಿರೋಧ

ಇವಿಎಂ ಬಳಕೆಗೆ ತೀವ್ರಗೊಂಡ ವಿರೋಧ
ಬೆಂಗಳೂರು , ಶುಕ್ರವಾರ, 15 ಡಿಸೆಂಬರ್ 2017 (21:05 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಾಗಿ ಮತಪತ್ರಗಳನ್ನು ಬಳಸಬೇಕೆಂಬ ಒತ್ತಾಯ ರಾಜ್ಯದಲ್ಲಿ ಬಲಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯದಲ್ಲಿ ಆಯೋಗಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ. ಈಗ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಗೆ ಮತಪತ್ರಗಳನ್ನು ಬಳಸಬೇಕು ಎಂದು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ.
 
ಇವಿಎಂಗಳ ಬಗ್ಗೆ ನಕಾರಾತ್ಮಕ ಚರ್ಚೆಗಳು ನಡೆಯುತ್ತಿರುವುದರಿಂದ ಮತಪತ್ರಗಳು ನಂಬಿಕೆಗೆ ಅನರ್ಹವಾಗಿವೆ ಎಂದು ಫೇಸ್‍ಬುಕ್‍ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಚಿವರು, ಹಳೆಯ ಪದ್ಧತಿಯಾದ ಮತಪತ್ರಗಳನ್ನು ಬಳಸಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಸು ಮಾರಿದ್ದಕ್ಕೆ ಪತಿ ವಿರುದ್ಧ ಕೋಪಗೊಂಡ ಮಹಿಳೆ ಮಾಡಿದ್ದೇನು?