Webdunia - Bharat's app for daily news and videos

Install App

ಆರ್ಕೆಸ್ಟ್ರಾ ಕಲಾವಿದರಿಗೆ ವೇಶ್ಯಾವಾಟಿಕೆ ಬಲೆ

Webdunia
ಸೋಮವಾರ, 7 ಫೆಬ್ರವರಿ 2022 (18:08 IST)
ಆರ್ಕೆಸ್ಟ್ರಾ ಕಲಾವಿದೆಯರನ್ನ ವೇಶ್ಯಾವಾಟಿಕೆಗೆ ಬರುವಂತೆ ಹಣದ ಆಮಿಷವೊಡ್ಡಿದ ಆರೋಪ ಆರ್ಕೆಸ್ಟ್ರಾ ಮಾಲೀಕ ವಿರದ್ಧವೇ ಕೇಳಿಬಂದಿದೆ. ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ. ಏನೂ ತೊಂದರೆ ಆಗಲ್ಲ, ನಾನೂ ಜತೆಯಲ್ಲೇ ಇರ್ತೀನಿ… ಎಂದು ಮಹಿಳಾ ಕಲಾವಿದೆಯೊಬ್ಬರ ಜತೆ ಸಂಭಾಷಣೆ ನಡೆಸಿದ ಆಡಿಯೋ ವೈರಲ್​ ಆಗಿದೆ.
ಆರ್ಕೆಸ್ಟ್ರಾ ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ನಾಣಿ‌ ಹಂದ್ರಾಳ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ತುಮಕೂರಿನ ಜಯನಗರ ಪೊಲೀಸ್ ಠಾಣೆಗೆ ಕಲ್ಪತರುನಾಡು ಆರ್ಕೆಸ್ಟ್ರಾ ಮಾಲೀಕರು ಹಾಗೂ ಕ್ಷೇಮಾಭಿವೃದ್ಧಿ ಸಂಘ ದೂರು ನೀಡಿದೆ.
 
ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿದ ಆರ್ಕೇಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಟಿ.ಆರ್​.ರಂಗರಾಜು, ಕೆಲವರು ಕಲೆಯ ಹೆಸರಿನಲ್ಲಿ ಮೋಸ ಮಾಡಲು ಹೊರಟಿರುವುದು ತುಮಕೂರು ಜಿಲ್ಲೆಗೆ ಕೆಟ್ಟ ಹೆಸರು ತಂದಿದೆ. ಜಿಲ್ಲೆಯಲ್ಲಿ 90 ಆರ್ಕೇಸ್ಟ್ರಾ ತಂಡಗಳಿಗೆ ಸೇರಿದ ಗಾಯಕರು, ಹಿನ್ನೆಲೆ ಸಂಗೀತಗಾರರು, ನೃತ್ಯಗಾರರು ಕಷ್ಟ ಅನುಭವಿಸುವಂತಾಗಿದೆ. ಅತಿ ಸಂಕಷ್ಟದಲ್ಲಿರುವ ಮಹಿಳಾ ಕಲಾವಿದರನ್ನು ಕೆಲವರು ಕಾರ್ಯಕ್ರಮ ಕೊಡಿಸುವ, ಹೆಚ್ಚಿನ ದುಡ್ಡು ಕೊಡಿಸುವ ಆಸೆ ತೋರಿಸಿ ಆಯೋಜಕರೊಂದಿಗೆ ಸಹಕರಿಸುವಂತೆ ಒತ್ತಾಯಿಸಿರುವ ಮೊಬೈಲ್​ ಸಂಭಾಷಣೆ ಇದೆ ಎಂದರು.
 
ಸಂಕಷ್ಟದಲ್ಲಿರುವ ಕಲಾವಿದರ ಅಸಹಾಯಕತೆ ದುರುಪಯೋಗ ಮಾಡಿಕೊಂಡು ಕೆಲವು ಮಹಿಳಾ ಕಲಾವಿದರನ್ನು ವೇಶ್ಯಾವಾಟಿಕೆಗೆ ದೂಡುವ ಯತ್ನ ನಡೆಯುತ್ತಿದೆ. ಪ್ರಸ್ತುತ ಮಹಿಳಾ ಕಲಾವಿದರನ್ನು ಕೆಟ್ಟದಾಗಿ ಬಳಸಿಕೊಳ್ಳಲು ನೋಡಿದ ತಂಡದ ಮಾಲೀಕರು ಬೆಂಗಳೂರಿನ ಸಂಘದಲ್ಲಿ ಪದಾಧಿಕಾರಿಯಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
 
ಸುದ್ದಿಗೋಷ್ಠಿಯಲ್ಲಿ ಕಲ್ಪತರು ನಾಡು ತುಮಕೂರು ಆರ್ಕೇಸ್ಟ್ರಾ ಮಾಲೀಕರು ಮತ್ತು ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ಕೆ.ನಾಗರಾಜು, ಮಧುಸೂದನ್​, ಅಖಿಲೇಶ್​, ಶಿವಣ್ಣ, ಮಂಜು, ಕವಿರಾಜು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments