ಆಕ್ಷೆಪಣೆ ಪ್ರತಿ ಮುಂಚಿತವಾಗಿ ನೀಡಲು ಆದೇಶ-ಡಿಕೆ ಶಿವಕುಮಾರ್

Webdunia
ಬುಧವಾರ, 10 ಆಗಸ್ಟ್ 2022 (19:53 IST)
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವ ಬಗ್ಗೆ ಆಕ್ಷೆಪಣೆ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಆದೇಶ ನೀಡಿದೆ. ಕೇಂದ್ರೀಯ ತನಿಖಾ ದಳವು ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಎಫ್​ಐಆರ್​ನ್ನು ರದ್ದುಪಡಿಸಬೇಕೆಂದು ಕೋರಿ ಡಿಕೆ ಶಿವಕುಮಾರ ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ನೇತೃತ್ವದ ಏಕ ಸದಸ್ಯ ಪೀಠವು ಪ್ರತಿವಾದಿಗಳಾದ ಸಿಬಿಐಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಬಿಐ ಪರ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್‌ ಅವರು, ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಎರಡು ವಾರ ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಶಿವಕುಮಾರ್‌ ಪರ ಹಿರಿಯ ವಕೀಲ ಸಿ.ಎಚ್‌ ಜಾಧವ್‌ ಅವರು ಆಕ್ಷೇಪಣೆಯ ಪ್ರತಿಯನ್ನು ಅರ್ಜಿದಾರರಿಗೆ ಮುಂಚಿತವಾಗಿ ನೀಡಲು ಆದೇಶಿಸಬೇಕೆಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಕೊಂದು ಆಕೆಯ ಹಣೆಗೆ ಕುಂಕುಮವಿಟ್ಟು ಆತ್ಮಹತ್ಯೆಗೆ ಶರಣಾದ ಪತಿ

ಫೋನ್ ಟ್ಯಾಪಿಂಗ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕುಮಾರಸ್ವಾಮಿ

ಚೆನ್ನೈ ದೇವಸ್ಥಾನಕ್ಕೆ ಯಾಂತ್ರಿಕ ಆನೆಯನ್ನು ಉಡುಗೊರೆಯಾಗಿ ನೀಡಿದ ಸೋನು ಸೂದ್‌

ಖಮೇನಿ ಸತ್ತಿದ್ದಕ್ಕೆ ಇಲ್ಲಿ ಪ್ರತಿಭಟನೆ ಮಾಡೋರು ದೇಶದ್ರೋಹಿಗಳು: ಬಸನಗೌಡ ಪಾಟೀಲ್ ಯತ್ನಾಳ್

ಸುಳ್ಯ: ಆನೆ ದಾಳಿಗೆ ಪೋಷಕರೇ ಎದುರೇ ಉಸಿರುನಿಲ್ಲಿಸಿದ ಪಿಯುಸಿ ವಿದ್ಯಾರ್ಥಿನಿ ಸಾವು

ಮುಂದಿನ ಸುದ್ದಿ
Show comments