Webdunia - Bharat's app for daily news and videos

Install App

ನಿಮಗೆ ಗೊತ್ತಾ..ರಾಜ್ಯದಲ್ಲಿ 3,000 ರೋಗಿಗಳು ಅಂಗಾಂಗ ಕಸಿಗೆ ಕಾಯುತ್ತಿದ್ದಾರೆ...

Webdunia
ಮಂಗಳವಾರ, 27 ಜೂನ್ 2017 (08:19 IST)
ಬೆಂಗಳೂರು:ರಾಜ್ಯದಲ್ಲಿ ಅಂಗಾಂಗ ದಾನಿಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ದಾನಿಗಳ ಸಂಖ್ಯೆ ಹೆಚ್ಚುತ್ತಿದ್ದರೂ ಬೇಡಿಕೆಯ ಪ್ರಮಾಣ ಅದಕ್ಕಿಂತ ಹೆಚ್ಚಾಗಿದೆಯಂತೆ. ಈ ಜನವರಿಯಿಂದ  ಜೂನ್‌ 15ರವರೆಗೆ 32 ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳು ನಡೆದಿವೆ.
 
2014ರಲ್ಲಿ 39 ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳು ನಡೆದಿದ್ದರೆ, 2016ರ ಹೊತ್ತಿಗೆ ಅವು 70ಕ್ಕೆ ಏರಿಕೆಯಾಗಿದ್ದವು. ಇದರಲ್ಲಿ ಮೂತ್ರಪಿಂಡ (ಕಿಡ್ನಿ) ಕಸಿ ಶಸ್ತ್ರಚಿಕಿತ್ಸೆಗಳ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಜೀವಸಾರ್ಥಕತೆ ಸೊಸೈಟಿ ಅಂಗಾಂಗ ಕಸಿಗಾಗಿ ಕರ್ನಾಟಕ ವಲಯ ಸಮನ್ವಯ ಸಮಿತಿಯನ್ನು (ಜೆಡ್‌ಸಿಸಿಕೆ) ಅಂಗಾಂಗ ದಾನಿಗಳ ಬಗ್ಗೆ ಆಸ್ಪತ್ರೆಗಳ ಮಾಹಿತಿಯನ್ನು ನೀಡುತ್ತವೆ. ಅದೇ ರೀತಿ ಅಂಗಗಳ ಅಗತ್ಯ ಇರುವ ರೋಗಿಗಳು ಇಲ್ಲಿ ಹೆಸರು ನೋಂದಾಯಿಸಿರುತ್ತಾರೆ. ದಾನಿಗಳು ಸಿಕ್ಕಾಗ ಕಸಿ ಮಾಡಲಾಗುತ್ತದೆ.
 
ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ (ವೈದ್ಯಕೀಯ) ಡಾ.ಟಿ.ಎಸ್. ಪ್ರಭಾಕರ್‌, ‘ಜೀವಸಾರ್ಥಕತೆ ಸೊಸೈಟಿ ಸೇವೆಗಳನ್ನು ವಿಸ್ತರಿಸುವ ಯೋಜನೆ ಇದೆ. ಈಗ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳನ್ನು ಬೆಂಗಳೂರು, ಮಂಗಳೂರು ಮತ್ತು ಬೆಳಗಾವಿಯಲ್ಲಿ ಮಾಡಲಾಗುತ್ತಿದೆ. ಈ ವರ್ಷ ಇನ್ನೂ ಮೂರು ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಪ್ರತಿ ವಲಯದಲ್ಲೂ ಕಸಿ ಕೇಂದ್ರಗಳು ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಂಗಾಂಗ ಸ್ವೀಕಾರ ಕೇಂದ್ರಗಳನ್ನು ಸ್ಥಾಪಿಸಲಾಗುವುದು’  ಎಂದು ತಿಳಿಸಿದ್ದಾರೆ.
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಯುಧ ಪೂಜೆಯಿದ್ದರೂ ಹಿಂದೂ ಶಿಕ್ಷಕರಿಗೆ ಗಣತಿ ಮಾಡಲು ಒತ್ತಾಯ: ಸಿಟಿ ರವಿ ಕಿಡಿ

ಸಾಕ್ಸ್ ಕೊಳೆಯಾಗಿದ್ದರೆ ಮತ್ತೆ ಮೊದಲಿನಂತಾಗಲು ಇಲ್ಲಿದೆ ಟಿಪ್ಸ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಲ್ಲಿ ಇನ್ನು ಸಿಂಗಲ್ ಆಗಿ ಕಾರಿನಲ್ಲಿ ಓಡಾಡಿದ್ರೂ ಟ್ಯಾಕ್ಸ್: ಇದೊಂದು ಬಾಕಿ ಇತ್ತು ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments