ಸಪ್ತಪದಿ ತುಳಿದ ಮಹಿಳಾ ನಿವಾಸಿಗಳು: ಹೆತ್ತವರಂತೆ ಮದುವೆ ಮಾಡಿಕೊಟ್ಟಿತು ಮಹಿಳಾ ನಿಲಯ

Webdunia
ಶುಕ್ರವಾರ, 12 ಅಕ್ಟೋಬರ್ 2018 (18:15 IST)
ಅಲ್ಲಿ ಇಂದು ಹೂವು, ಮಾವಿನ ತೋರಣ, ರಂಗೋಲಿಗಳಿಂದ ಆಲಂಕೃತಗೊಂಡ ನಿಲಯದಲ್ಲಿ ದೈನಂದಿನ ಕಚೇರಿ ಕೆಲಸದಲ್ಲಿ ನಿರತರಾಗುತ್ತಿದ್ದ ಅಧಿಕಾರಿ-ಸಿಬ್ಬಂದಿಗಳು ಮದುವೆಯ ಶಾಸ್ತ್ರದ ಕಾರ್ಯದಲ್ಲಿ ಬ್ಯೂಸಿಯಾಗಿದ್ದು ಕಂಡುಬಂತು.

ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ರಾಜ್ಯ ಮಹಿಳಾ ವಸತಿ ನಿಲಯದಲ್ಲಿ  ಮದುವೆಯ ಸಂಭ್ರಮದ ಮನೆಮಾಡಿತು. ನಿಲಯದಲ್ಲಿ ಕಳೆದ 4 ವರ್ಷದಿಂದ ನಿವಾಸಿಯಾಗಿರುವ ಅಂಬಿಕಾ ಮತ್ತು 7 ವರ್ಷಗಳಿಂದ ನಿವಾಸಿಯಾಗಿರುವ ಅಶ್ವಿನಿಯ ಮದುವೆ ಸಮಾರಂಭ ನಡೆಯಿತು.

ಅನಾಥೆಯರಿಗೆ ಆಶ್ರಯಕೊಟ್ಟ ಮಹಿಳಾ ನಿಲಯವು ನಿವಾಸಿಗಳ ಒಪ್ಪಿಗೆ ಪಡೆದು ಅವರ ಮುಂದಿನ ಭವಿಷ್ಯದ ಪುನರ್ವಸತಿ ಹಿತದೃಷ್ಠಿಯಿಂದ ಹೆತ್ತವರಂತೆ ಮದುವೆ ಮಾಡಿಕೊಟ್ಟಿದೆ. ಅಂಬಿಕಾಳನ್ನು ವರಸಿಕೊಂಡ ಗುಂಡುರಾವ ಜೋಷಿ ಹಾಗೂ ಅಶ್ವಿನಿಯೊಂದಿಗೆ ಮದುವೆಯಾದ ಪವನಕುಮಾರ ಕುಲಕರ್ಣಿ ಇಬ್ಬರು ಅನಾಥೆಯರ ಬಾಳಿಗೆ ಬೆಳಕು ನೀಡಿದ್ದಾರೆ.

 ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ದೈವ ಅಕ್ಷತೆ ಹಾಗೂ 11.42 ಗಂಟೆಗೆ ಮಿಥುನ ಲಗ್ನದ ಶುಭಮುಹೂರ್ತದಲ್ಲಿ ನವ ವಧು-ವರರು ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಅಚಾರ್ಯ ಬಾಪುರಾವ ಅವರು ಹಿಂದು ಧರ್ಮದ ಪ್ರಕಾರ ಮದುವೆ ಶಾಸ್ತ್ರ ಕಾರ್ಯವನ್ನು ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments