Select Your Language

Notifications

webdunia
webdunia
webdunia
webdunia

ವಿ. ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಆಸ್ಕರ್ ಫರ್ನಾಂಡಿಸ್

ವಿ. ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಆಸ್ಕರ್ ಫರ್ನಾಂಡಿಸ್
ಬೆಂಗಳೂರು , ಬುಧವಾರ, 22 ಜೂನ್ 2016 (16:16 IST)
ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿ ತೀವ್ರ ಅಸಮಾಧಾನ ಗೊಂಡಿರುವ ಹಿರಿಯ ಕಾಂಗ್ರೆಸ್ ಮುಖಂಡ ವಿ. ಶ್ರೀನಿವಾಸ್ ಪ್ರಸಾದ್‌ರನ್ನು, ಆಸ್ಕರ್ ಫರ್ನಾಂಡಿಸ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಶ್ರೀನಿವಾಸ್ ಪ್ರಸಾದ್ ತೀವ್ರ ವಾಗ್ದಾಳಿ ನಡೆಸುತ್ತಿರುವದರಿಂದ ಇಂದು ಆಸ್ಕರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯ ಧಕ್ಕೆ ಬಾರದಂತೆ ನಡೆದುಕೊಳ್ಳಿ ಎಂದು ಮನವಿ ಮಾಡಿರುವುದಾಗಿ ಮೂಲಗಳು ತಿಳಿಸಿವೆ. 
 
ಗಾಲ್ಫ್‌ ಪ್ರದೇಶದಲ್ಲಿರುವ ಶ್ರೀನಿವಾಸ್‌ಪ್ರಸಾದ್ ನಿವಾಸದಲ್ಲಿ ಆಸ್ಕರ್ ಫರ್ನಾಂಡಿಸ್ ಚರ್ಚೆ ನಡೆಸಿದ್ದು, ಸಂಪೂರ್ಣ ಮಾಹಿತಿಯನ್ನು ಹೈಕಮಾಂಡ್‍‌ಗೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಸಾದ್ ತಿಳಿಸಿದ್ದಾರೆ.
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಅತೃಪ್ತ ಶಾಸಕರ ಮಹತ್ವದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ದೆಹಲಿಗೆ ತೆರಳಿ ಹೈಕಮಾಂಡ್‌ಗೆ ದೂರು ನೀಡುವುದಾಗಿ ಪ್ರಸಾದ್ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ವಿರುದ್ಧ ಬಂಡೆಗಲ್ಲಿನಂತೆ ನಿಂತವನು ನಾನೊಬ್ಬನೇ : ಕೇಜ್ರಿವಾಲ್