Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿಯನ್ನು ಸಿಎಂ ಮಾಡುವುದೇ ಗುರಿ: ಮಧು ಬಂಗಾರಪ್ಪ

ಕುಮಾರಸ್ವಾಮಿಯನ್ನು ಸಿಎಂ ಮಾಡುವುದೇ ಗುರಿ: ಮಧು ಬಂಗಾರಪ್ಪ
ಶಿವಮೊಗ್ಗ , ಶನಿವಾರ, 6 ಮೇ 2017 (15:53 IST)
ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಸಿಎಂ  ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.
 
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸೀಟುಗಳನ್ನು ಗೆಲ್ಲುವುದು ಬಹುತೇಕ ಖಚಿತವಾಗಿದೆ. ಕುಮಾರಸ್ವಾಮಿ ಮತ್ತು ದೇವೇಗೌಡರು ರಾಜ್ಯಾದ್ಯಂತ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
 
ಕರ್ನಾಟಕಕ್ಕೆ ಕುಮಾರಣ್ಣ ಎನ್ನುವ ಹೆಸರಲ್ಲಿ ಸಂಘಟನೆ ಆರಂಭಿಸಲಾಗುವುದು. ನಾನು ಯುವ ಚೇತನ ಎನ್ನುವ ಸಂಘಟನೆ ಆರಂಭಿಸಿದಾಗ ತಂದೆ ತೀರಿಕೊಂಡಿದ್ದರು. ಅಂತಹ ಸಂದರ್ಭದಲ್ಲೂ ಸಂಘಟನೆಯನ್ನು ಸಮರ್ಥವಾಗಿ ಮುಂದುವರಿಸಿಕೊಂಡು ಹೋಗಿದ್ದೇನೆ ಎಂದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರೈತ ವಿರೋಧಿ ಸರಕಾರವಾಗಿದೆ. ಬಿಜೆಪಿ ಕೋಮುವಾದಿ ಪಕ್ಷವಾಗಿದೆ. ಆದ್ದರಿಂದ, ಜನತೆ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಬಯಸಿದ್ದಾರೆ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಭವಿಷ್ಯ ನುಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂಗ್ಲೆಂಡ್‌‌ನ ಕೌನ್ಸಿಲರ್ ಚುನಾವಣೆಯಲ್ಲಿ ಗೆದ್ದ 2ನೇ ಕನ್ನಡಿಗ