Publish Date: Thu, 12 Mar 2026 (17:41 IST)
Updated Date: Thu, 12 Mar 2026 (17:48 IST)
ಬೆಂಗಳೂರು: ಹಸಿದವರಿಗೆ ಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ಒದಗಿಸುತ್ತಿದ್ದ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಅನ್ನು ಇದೀಗ ಬಂದ್ ಮಾಡಲಾಗಿದೆ.
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ಇದೀಗ ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಈ ಸಂಬಂಧ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಟಿಎ ಶರವಣ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಇತ್ತೀಚೆಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ಸಮಸ್ಯೆಯಿಂದ ಕ್ಯಾಂಟೀನ್ ನಡೆಸುವುದು ಕಷ್ಟವಾಗಿದೆ ಎಂದು ಹೇಳಿಕೊಂಡಿದ್ದಾರೆ.
ಗ್ಯಾಸ್ ಸಿಲಿಂಡರ್ ಪೂರೈಕೆ ಯಥಾಸ್ಥಿತಿಗೆ ಮರಳಿದ ನಂತರ ಕ್ಯಾಂಟೀನ್ ಮರುಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.