Webdunia - Bharat's app for daily news and videos

Install App

ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ಸಾಲ ಮನ್ನಾ: ಕುಮಾರಸ್ವಾಮಿ

Webdunia
ಶುಕ್ರವಾರ, 10 ಫೆಬ್ರವರಿ 2017 (15:59 IST)
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
 
ಜೆಡಿಎಸ್‌ನ ರಾಜ್ಯಮಟ್ಟದ ಚುನಾವಣಾ ಪೂರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದ ಜನರ ಹಿತ ಕಾಪಾಡುವಲ್ಲಿ ವಿಫಲವಾಗಿವೆ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ಅರಿತಿದ್ದಾರೆ ಎಂದರು. 
 
ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ಕೇವಲ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು. ನಮ್ಮ ಸರಕಾರ ರೈತರ ಹಿತದ ಪರವಾಗಿರಲಿದೆ ಎಂದು ತಿಳಿಸಿದ್ದಾರೆ.
 
ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಪ್ರಧಾನಿ ನರೇಂದ್ರ ಮೋದಿಯನ್ನು ಹಗುರವಾಗಿ ಕಾಣಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದರು.
 
ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಗುರಿಯಾಗಬೇಕು. ಇಂದಿನಿಂದಲೇ ಜನರಿಗೆ ಜೆಡಿಎಸ್ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮನವರಿಕೆ ಮಾಡಿಕೊಡಿ ಎಂದು ಕಿವಿಮಾತು ಹೇಳಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments