Webdunia - Bharat's app for daily news and videos

Install App

ರಾಜಧಾನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Webdunia
ಸೋಮವಾರ, 24 ಡಿಸೆಂಬರ್ 2018 (16:19 IST)
ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಅವರ ಅಭಿಮಾನಿಗಳು ಹೆದ್ದಾರಿ ತಡೆ ನಡೆಸಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಿಂದಾಗಿ ನೂರಾರು ವಾಹನಗಳ ಸವಾರರು ಪರದಾಡುವಂತಾಗಿದೆ.

ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ತಮ್ಮ ನಾಯಕನಿಗೆ ಸಚಿವ ಸ್ಥಾನ ಕೊಡದಿದ್ದಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ಅಭಿಮಾನಿಗಳು ನಡೆಸಿದ್ದಾರೆ.

ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡದಕ್ಕೆ ಆನೇಕಲ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 7 ನ್ನು ತಡೆದು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಧರಣಿಯಿಂದಾಗಿ, ರಾಷ್ಟ್ರೀಯ ಹೆದ್ದಾರಿ 7 ರ ಹೆನ್ನಾಗರ ಗೇಟ್ ಬಳಿ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ರಸ್ತೆಯಲ್ಲಿ ಕುಳಿತು ಕೆಪಿಸಿಸಿಗೆ ಧಿಕ್ಕಾರ ಕೂಗುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಸ್ಥಾನವನ್ನು ರಾಮಲಿಂಗಾರೆಡ್ಡಿ ಅವರಿಗೆ ಕೊಡಲೇಬೇಕೆಂದು ಪಟ್ಟುಹಿಡಿದಿದ್ದಾರೆ.

ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿದೆ. ಕಿಲೋಮೀಟಲ್ ಉದ್ದ ಸಾಲುಗಟ್ಟಿ ನಿಂತ ವಾಹನಗಳಿಂದಾಗಿ, ಜನರು, ಪ್ರಯಾಣಿಕರು ಪರದಾಡುವಂತಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments