ಎಂಎಲ್ಸಿಗೆ ಸೇರಿದ ಮದ್ಯದ ಅಂಗಡಿ ಸ್ಥಳಾಂತರಕ್ಕೆ ಆಕ್ರೋಶ

Webdunia
ಶನಿವಾರ, 14 ಜುಲೈ 2018 (17:20 IST)
ಹಾಲಿ ಎಂಎಲ್ಸಿ  ಧರ್ಮೇಗೌಡ ಅಧೀನದಲ್ಲಿ ಇರುವಂತಹ ಪವನ್ ವೈನ್ ಮದ್ಯದಂಗಡಿ ಅನ್ನು ಸಕರಾಯಪಟ್ಟಣ ಹೃದಯ ಭಾಗದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ಸ್ಥಳಾಂತರಗೊಳಿಸಲು ನಿರ್ಧರಿಸಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಸಕ್ಕರಾಯಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಇದಕ್ಕೆ ಸ್ಥಳೀಯರ ಆಕ್ರೋಶವೂ ವ್ಯಕ್ತವಾಗಿದೆ. ಬಂಜಾರ್ ಸಮುದಾಯದವರು ಎಲ್ಲರೂ ಸೇರಿ ನಿರ್ಮಿಸಿರುವ ಲೇಔಟ್ನಲ್ಲಿ ಧನಂಜಯ್ ಎಂಬಾತನಿಂದ 47*48 ಅಳತೆಯ ನಿವೇಶನವನ್ನು ಖರೀದಿಸಿ ಈ ಜಾಗದಲ್ಲಿ ಧರ್ಮೇಗೌಡರ ಅಧೀನದಲ್ಲಿರುವ ಪವನ್ ವೈನ್ಸ್ ಮದ್ಯದ ಅಂಗಡಿಯನ್ನು ಸ್ಥಳಾಂತರ ಮಾಡಲು ತಂತ್ರ ಕುತಂತ್ರವನ್ನು ಮಾಡಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. 

ಈ ರೀತಿ ಮದ್ಯದ ಅಂಗಡಿಯನ್ನು ಜನ ವಸತಿ ಇರುವ ಜಾಗದಲ್ಲಿ ನಿರ್ಮಿಸಲು ಸಾಧ್ಯವಿಲ್ಲ ಮತ್ತು ಇದಕ್ಕೆ ನಮ್ಮ ವಿರೋಧವಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಯಾವುದೇ ಕಾರಣಕ್ಕೂ ಈ ಬಡಾವಣೆಯಲ್ಲಿ ಮದ್ಯದಂಗಡಿ ತರಲು ನಾವು ಬಿಡುವುದಿಲ್ಲ ಎಂದು ಬಡಾವಣೆ ನಿವಾಸಿಗಳು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments