Publish Date: Mon, 30 Sep 2019 (16:57 IST)
Updated Date: Mon, 30 Sep 2019 (16:59 IST)
ಪಿಯುಸಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.
ವಿಜಯಪುರ ಜಿಲ್ಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ, ವಿಜಯಪೂರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಅಸಂತಾಪೂರ ಗ್ರಾಮದ ರೇಣು ಮಾದರ ಎನ್ನುವ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಕೆಲವು ಕಾಮ ಪಿಶಾಚಿಗಳು ಅತ್ಯಾಚಾರಗೈದು ಕೊಲೆ ಮಾಡಿದ್ದಾರೆ.
ತಲೆ ಮೆರಸಿಕೊಂಡಿದ್ದಾರೆ. ಕೂಡಲೆ ಅತ್ಯಾಚಾರಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ರು.