Webdunia - Bharat's app for daily news and videos

Install App

ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ವ್ಯಕ್ತವಾದ ಆಕ್ರೋಶ

Webdunia
ಶನಿವಾರ, 10 ನವೆಂಬರ್ 2018 (14:46 IST)
ದಾವಣಗೆರೆ ನಗರದ ಹೈ ಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಪಾಲಿಕೆಯಿಂದ ಟಿಪ್ಪು ಜಯಂತಿ ಆಚರಣೆ‌ ಮಾಡಲಾಗುತ್ತಿತ್ತು. ಈ ವೇಳೆ ಆಚರಣೆಯ ವಿರುದ್ಧ ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಾವಣಗೆರೆನಗರದ ಜಯದೇವ ವೃತ್ತದ ಬಳಿ ಟಿಪ್ಪು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಟಿಪ್ಪು ಜಯಂತಿ ಆಚರಣೆ ಬೇಡ, ಟಿಪ್ಪು ಒಬ್ಬ ದೇಶ ದ್ರೂಹಿ, ಹಿಂದುಗಳನ್ನು ಹತ್ಯೆ ಮಾಡಿ ದೇಶ ಕೊಳ್ಳೆ ಹೊಡೆದ ಲೂಟಿಕೋರ ಎಂದು ಕಾರ್ಯಕರ್ತರು ಕಿರಿಕಾರಿದರು. ಕಳೆದ  ಹಲವಾರು ವರ್ಷಗಳಿಂದ ಪ್ರತಿಭಟನೆ ಮಾಡಿದರು ಟಿಪ್ಪು ಜಯಂತಿ ನಿಷೇಧ ಮಾಡಿಲ್ಲ. ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ ಪ್ರಸ್ತುತ ಸಿಎಂ ಕುಮಾರಸ್ವಾಮಿಯವರೆ ಜಯಂತಿಗೆ ಮುಂದಾಗಿದ್ದಾರೆ ಅಂತ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಕಂಡು ಬಂತು. ಕಾರ್ಯಕ್ರಮ ಸ್ಥಳಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ 20ಕ್ಕೂ ಹೆಚ್ಚು ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದರು.

ಕಾರ್ಯಕ್ರಮದಲ್ಲಿ ಮಾತನಾಡಿದ ದಾವಣಗೆರೆ ಉಸ್ತುವಾರಿ ಸಚಿವ ಎಸ್.ಆರ್. ಶ್ರೀನಿವಾಸ್, ಟಿಪ್ಪುವಿನಂತ ಮಹನೀಯರ ಜಯಂತಿ ಆಚರಣೆಗೆ ವಿರೋಧ ಮಾಡುವಂತಹ ನೀಚ ಕೆಲಸ ಕೆಲವರು ಮಾಡುತ್ತಿದ್ದಾರೆ ಎಂದು‌ ಪರೋಕ್ಷವಾಗಿ ಬಿಜೆಪಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಟಿಪ್ಪು ಪ್ರಮುಖ ಪಾತ್ರವಹಿಸಿದ್ದವರು. ಆದರೆ ಅಂತವರ ಜಯಂತಿಯನ್ನು ಮಾಡಲು ಕೆಲವರು ಅಡ್ಡಿಪಡಿಸುತ್ತಿದ್ದಾರೆ. ಟಿಪ್ಪು ಜಯಂತಿ ವಿರೋಧಿಸುವವರು ಮುಸ್ಲಿಂರನ್ನು ದೇಶ ಬಿಟ್ಟು ಆಚೆ ಕಳಿಸಿ ನೋಡೋಣ ಎಂದರು.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments