Webdunia - Bharat's app for daily news and videos

Install App

ಗೂಬೆ ಮಾರಾಟ ಯತ್ನ: ಸಿಕ್ಕಿ ಬಿದ್ದವನಾರು?

Webdunia
ಶುಕ್ರವಾರ, 29 ಜೂನ್ 2018 (18:33 IST)
ನವಿಲು ಗರಿ ಮಾರಾಟ, ಕೋಳಿ, ಮೀನು ಮಾರಾಟ ಕೇಳಿದ್ದೇವೆ, ನೋಡಿದ್ದೇವೆ. ಆದರೆ ಗೂಬೆ ಮಾರಾಟಕ್ಕೆ ಕೆಲವರು ಯತ್ನಿಸುತ್ತಿರುವ ಘಟನೆ ವರದಿಯಾಗಿದೆ. 
ಅಂದಹಾಗೆ ಗಡಿ ಜಿಲ್ಲೆಯಾಗಿರುವ ಚಾಮರಾಜನಗರದಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಸಿಕ್ಕಿಬಿದ್ದ ವ್ಯಕ್ತಿ ಗೂಬೆಯನ್ನು ಜನರಿಗೆ ಮಾರಾಟ ಮಾಡುತ್ತಿದ್ದ. ಗೂಬೆ ಮಾರಾಟದ ಹಿನ್ನೆಲೆಯಲ್ಲಿ ಬೇರಂಬಾಡಿ ಗ್ರಾಮದ ಮನು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಗೂಬೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸ್ ಠಾಣೆಗೆ ಲಭ್ಯವಾಗಿತ್ತು. ಹೀಗಾಗಿ ಮಾಹಿತಿ ಆಧರಿಸಿ ಗುಂಡ್ಲುಪೇಟೆ ಸಿಪಿಐ ಬಾಲಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಮನು ಸಿಕ್ಕಿ ಬಿದ್ದರೆ, ಮತ್ತೊಬ್ಬ ಆರೋಪಿ ವೆಂಕಟೇಶ್ ಪರಾರಿಯಾಗಿದ್ದಾನೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments