ಸ್ವಂತ ಮನೆ ಪಾಲಿಟಿಕ್ಸ್ ಶುರು!

Webdunia
ಮಂಗಳವಾರ, 5 ಮಾರ್ಚ್ 2019 (15:05 IST)
ಲೋಕಸಭೆ ಚುನಾವಣೆಗೂ ಮೊದಲೇ ಆ ಕ್ಷೇತ್ರದಲ್ಲಿ ಸ್ವಂತ ಮನೆ ಪಾಲಿಟಿಕ್ಸ್ ಜೋರಾಗುತ್ತಿದೆ.
ಮಂಡ್ಯದಲ್ಲಿ ಸ್ವಂತ ಮನೆ ಪಾಲಿಟಿಕ್ಸ್ ಶುರುವಾಗಿದೆ. ಮಂಡ್ಯದಲ್ಲಿ ಐದು ಎಕರೆ ಕೃಷಿ ಜಮೀನು ಖರೀದಿಸಿ, ಸ್ವಂತ ಮನೆ ನಿರ್ಮಾಣಕ್ಕೆ ನಿಖಿಲ್ ಕುಮಾರಸ್ವಾಮಿ ಮುಂದಾಗಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಗಿರುವ ನಿಖಿಲ್ ಕುಮಾರಸ್ವಾಮಿ, ಸ್ವಂತ ಮನೆ ನಿರ್ಮಿಸಬೇಕೆಂದು ಮೊನ್ನೆ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಇಚ್ಛೆ ವ್ಯಕ್ತಪಡಿಸಿದ್ದರು. ಮಂಡ್ಯದಲ್ಲೇ ನೆಲೆಸಿ ನಿಮ್ಮ ಕಷ್ಟಗಳಿಗೆ ಧ್ವನಿಯಾಗುತ್ತೇನೆ ಎಂಬ ಸಂದೇಶ ಜಿಲ್ಲೆಯ ಜನರಿಗೆ ರವಾನಿಸಲು ಜಮೀನು ಖರೀದಿಗೆ ಮುಂದಾಗಿದ್ದಾರೆ.

ಮಂಡ್ಯ ನಗರಕ್ಕೆ ಸಮೀಪ ಐದು ಎಕರೆ ಕೃಷಿ ಜಮೀನು ನೋಡಲು ಜಿಲ್ಲೆಯ ಜೆಡಿಎಸ್ ಮುಖಂಡರಿಗೆ ತಿಳಿಸಿರುವ ನಿಖಿಲ್ ಸೂಚನೆಯಂತೆ ಈಗಾಗಲೇ ಜಮೀನು ಹುಡುಕಾಟದಲ್ಲಿ ಜೆಡಿಎಸ್ ಮುಖಂಡರು ತೊಡಗಿದ್ದಾರೆ.
ಕಾರ್ಯಕರ್ತರು ಮುಖಂಡರ ಜೊತೆ ಚರ್ಚಿಸಲು ವಿಶಾಲವಾದ ಜಾಗ ಇರುವ ಮನೆಯ ಜೊತೆಗೆ, ವಾಸ್ತು ಪ್ರಕಾರದ ಮನೆಯನ್ನೇ ಹುಡುಕುತ್ತಿರುವ ನಿಖಿಲ್ ಚುನಾವಣೆಗೂ ಮುನ್ನವೇ ಭಾರಿ ಲೆಕ್ಕಾಚಾರದೊಂದಿಗೆ ಕಣಕ್ಕೆ ಇಳಿಯುತ್ತಿದ್ದಾರೆ.
ಐದು ಎಕರೆ ಜಮೀನು ಖರೀದಿಸಿ ಅಲ್ಲಿಯೂ ತೋಟದ ಮನೆ ನಿರ್ಮಿಸಲು ಈಗಾಗಲೇ ಪ್ಲಾನ್ ಸಿದ್ಧಪಡಿಸಿದ್ದಾರೆ. ರಾಜಕೀಯ, ಸಿನೆಮಾ ಜೊತೆಗೆ ಕೃಷಿಯಲ್ಲೂ ತೊಡಗಿಸಿಕೊಳ್ಳಲು ನಿಖಿಲ್ ಚಿಂತನೆ ನಡೆಸಿದ್ದಾರೆ.

ಮಂಡ್ಯದಲ್ಲಿ ಸ್ವಂತ ಜಮೀನು, ಮನೆ ಮಾಡದಿದ್ರೆ ಚುನಾವಣೆ ನಂತರ ನಿಖಿಲ್ ಮಂಡ್ಯಕ್ಕೆ ಬರಲ್ಲ ಎಂಬ ತಪ್ಪು ಸಂದೇಶ ರವಾನೆಯಾಗುತ್ತೆ. ಇದು ಮತಗಳಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಎಂಬ ಯೋಚನೆಯಲ್ಲಿರುವಂತಿದೆ. ಹೀಗಾಗಿ ಸ್ವಂತ ಕೃಷಿ ಜಮೀನು, ಮನೆ ನಿರ್ಮಿಸಿ ಮಂಡ್ಯ ಜನರನ್ನು ಭಾವನಾತ್ಮಕವಾಗಿ ಸೆಳೆಯಲು ನಿಖಿಲ್ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎನ್ನಲಾಗಿದೆ. ನಿಖಿಲ್‌ಗೆ ಎದುರಾಳಿಯಾಗಿ ಸುಮಲತಾ ಅಂಬರೀಷ್ ಸ್ಪರ್ಧೆ ಮಾಡೋದು ಖಚಿತವಾಗಿದೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments