ಆಸ್ಪತ್ರೆಯಲ್ಲಿ ಏಕಾಏಕಿ ಆಕ್ಸಿಜನ್ ಬಂದ್!

Webdunia
ಭಾನುವಾರ, 28 ನವೆಂಬರ್ 2021 (16:39 IST)
ಚಿಕ್ಕಬಳ್ಳಾಪುರ : ಕೊರೊನಾ 2ನೇ ಅಲೆ ವೇಳೆ ಆಕ್ಸಿಜನ್ ಗೆ ದೇಶಾದ್ಯಂತ ಹಾಹಾಕಾರ ಎದ್ದಿದ್ದು ನಮಗೆಲ್ಲಾ ಗೊತ್ತೇ ಇದೆ.
ಆಕ್ಸಿಜನ್ ಕೊರತೆಯಿಂದ ಜನ ನರಳಾಡಿ ಸತ್ತಿದ್ದು ನೆನಪಿನಿಂದ ಮಾಸಿಲ್ಲ. ಜೀವವಾಯು ಇಲ್ಲವಾದರೆ ರೋಗಿಗಳು ಹೇಗೆ ಕ್ಷಣದಲ್ಲೇ ಶವವಾಗುತ್ತಾರೆ ಎಂಬುವುದಕ್ಕೆ ಚಾಮರಾಜನಗರ ಪ್ರಕರಣಕ್ಕಿಂತ ಸಾಕ್ಷಿ ಬೇಕಿಲ್ಲ. ಅಂತಹದ್ದೇ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಸಿದೆ.
ಆಸ್ಪತ್ರೆ ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಕೆಲವೇ ಕ್ಷಣಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಉಸಿರು ಚೆಲ್ಲಿದಿದ್ದಾರೆ. ಉಪ್ಪಕುಂಟಪಲ್ಲಿ ಗ್ರಾಮದ ನಿವಾಸಿ ಗಂಗುಲಮ್ಮ (70) ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಮೃತಪಟ್ಟಿದ್ದಾರೆ.
ಗಂಗುಲಮ್ಮ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಸ್ಪತ್ರೆಯಲ್ಲಿ ಏಕಾಏಕಿ ಆಕ್ಸಿಜನ್ ಆಫ್ ಆಗಿದೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದ ಗಂಗುಲಮ್ಮ ಉಸಿರಾಡಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ.
ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಏನು ಇರಲಿಲ್ಲ. ಆದರೆ ನಿರ್ಲಕ್ಷ್ಯದಿಂದ ರಾತ್ರಿ 1:30ಕ್ಕೆ ಆಕ್ಸಿಜನ್ ಆಫ್ ಮಾಡಿದ್ದಾರೆ. ಇದರಿಂದ ಒಬ್ಬರ ಪ್ರಾಣವೇ ಹೋಗಿದೆ. ಗಂಗಲಮ್ಮ ಸಾವಿಗೆ ಆಸ್ಪತ್ರೆ ಸಿಬ್ಬಂದಿಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ವೈದ್ಯರಿಗೆ ಕುಟುಂಬಸ್ಥರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ವೈದ್ಯಕೀಯ ಆಢಳಿತಾಧಿಕಾರಿ ಸಂತೋಷ್ ಎದುರು ಆಸ್ಪತ್ರೆ ಸಿಬ್ಬಂದಿ ವಿರುದ್ದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ವೈದ್ಯಕೀಯ ಸಿಬ್ಬಂದಿಗಳ ವಿರುದ್ಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೂಕ್ತ ತನಿಖೆಯಿಂದ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments