Select Your Language

Notifications

webdunia
webdunia
webdunia
webdunia

ಮಳೆಗೆ ಕೊಚ್ಚಿ ಹೋದ ಭತ್ತದ ಬೆಳೆ

ಮಳೆಗೆ ಕೊಚ್ಚಿ ಹೋದ ಭತ್ತದ ಬೆಳೆ
ದಾವಣಗೆರೆ , ಬುಧವಾರ, 24 ಮೇ 2023 (16:00 IST)
ರಾಜ್ಯದಾದ್ಯಂತ ಮಳೆ ಮುಂದುವರೆಯುತ್ತಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಆಲಿಕಲ್ಲು‌ ಮಳೆಗೆ ಭತ್ತದ ಬೆಳೆ ಕೊಚ್ಚಿ ಹೋಗಿ ರೈತನ‌ ಶ್ರಮ ನೀರು ಪಾಲಾಗಿದೆ. ದಾವಣಗೆರೆ ಹಿರೇತೊಗಲೇರಿ ಗ್ರಾಮದಲ್ಲಿ ಮಳೆ ಅವಾಂತರಕ್ಕೆ ರೈತರು ತತ್ತರಿಸಿದ್ದು, ಕೊಯ್ಲಿಗೆ ಬಂದಿದ್ದ 250ಕ್ಕೂ ಹೆಚ್ಚು ಪ್ರದೇಶದ ಭತ್ತ ಆಲಿಕಲ್ಲಿನ ಮಳೆಯ ಹೊಡೆತಕ್ಕೆ ಮಣ್ಣು ಪಾಲಾಗಿದೆ. ಎಕರೆಗೆ 40 ಚೀಲ ಭತ್ತವನ್ನ ನಿರೀಕ್ಷೆ ಮಾಡಿದ್ದ ರೈತನಿಗೆ ನಿರಾಸೆಯಾಗಿದೆ. ಮಳೆ ಬರದೆ ಇನ್ನೆರೆಡು ದಿನ ಕಳೆದಿದ್ದರೆ ಭತ್ತದ ಕೊಯ್ಲು ಮಾಡುತ್ತಿದ್ದರು. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ಆಗಿದ್ದು ಅಧಿಕಾರಿಗಳೇ ಹಾನಿಯನ್ನು ಅಂದಾಜಿಸಿ ಸೂಕ್ತ ಪರಿಹಾರ ನೀಡಿ ಎಂದು ರೈತ ಪರಿಪರಿಯಾಗಿ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುತ್ತಪ್ಪ ರೈ ಪುತ್ರನ ಮೇಲೆ ಚಾರ್ಜ್ ಶೀಟ್