Select Your Language

Notifications

webdunia
webdunia
webdunia
webdunia

ಪದ್ಮರಾಜ್ ರಾಮಯ್ಯ ಗೆಲ್ಲುವುದು ಗ್ಯಾರಂಟಿ: ಭವಿಷ್ಯ ನುಡಿದ ಜನಾರ್ದನ ಪೂಜಾರಿ

Janardhana Poojary

Sampriya

ಮಂಗಳೂರು , ಮಂಗಳವಾರ, 26 ಮಾರ್ಚ್ 2024 (19:07 IST)
Photo Courtesy Facebook
ಮಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಗೆಲ್ಲುವುದು ಗ್ಯಾರಂಟಿ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಭವಿಷ್ಯ ನುಡಿದಿದ್ದಾರೆ.

ಇಂದು ನಗರದ ಲಾಲ್ ಬಾಗ್ ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿ ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪದ್ಮರಾಜ್ ಆರ್. ಅವರು ಗೆಲ್ಲೋದು ಗ್ಯಾರಂಟಿ. ಈ ಬಗ್ಗೆ ಯಾವ ಸಂಶಯವೂ ಬೇಡ. ಅವರ ಮಾತನ್ನು ಕೇಳಿದ್ದೀರಿ ಅವರು ಅಹಂಕಾರಿಯಲ್ಲ. ಮುಂದೆ ಎಲ್ಲವೂ ದೇವರ ಕೈಯಲ್ಲಿದೆ. ದೇವರು ನಮ್ಮ ಹಿಂದೆಯೇ ಇದ್ದಾನೆ. ಅವನು ನೋಡ್ತಾ ಇದ್ದಾನೆ. ಖಂಡಿತವಾಗಿ ಪದ್ಮರಾಜ್ ಗೆಲ್ತಾರೆ ಎಂದು ಹೇಳಿದರು.

ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕಾಂಗ್ರೆಸ್‌ನಿಂದ ವಕೀಲ ಪದ್ಮರಾಜ್ ರಾಮಯ್ಯ ಅವರು ಕಣದಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ನ ಮತ್ತೊಂದು ವಿಕೆಟ್‌ ಬಿಜೆಪಿಯತ್ತ: 'ಕಮಲ' ಕೈ ಹಿಡಿದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್