Webdunia - Bharat's app for daily news and videos

Install App

ಪದ್ಮರಾಜ್ ರಾಮಯ್ಯ ಗೆಲ್ಲುವುದು ಗ್ಯಾರಂಟಿ: ಭವಿಷ್ಯ ನುಡಿದ ಜನಾರ್ದನ ಪೂಜಾರಿ

Sampriya
ಮಂಗಳವಾರ, 26 ಮಾರ್ಚ್ 2024 (19:07 IST)
Photo Courtesy Facebook
ಮಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಗೆಲ್ಲುವುದು ಗ್ಯಾರಂಟಿ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಭವಿಷ್ಯ ನುಡಿದಿದ್ದಾರೆ.

ಇಂದು ನಗರದ ಲಾಲ್ ಬಾಗ್ ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿ ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪದ್ಮರಾಜ್ ಆರ್. ಅವರು ಗೆಲ್ಲೋದು ಗ್ಯಾರಂಟಿ. ಈ ಬಗ್ಗೆ ಯಾವ ಸಂಶಯವೂ ಬೇಡ. ಅವರ ಮಾತನ್ನು ಕೇಳಿದ್ದೀರಿ ಅವರು ಅಹಂಕಾರಿಯಲ್ಲ. ಮುಂದೆ ಎಲ್ಲವೂ ದೇವರ ಕೈಯಲ್ಲಿದೆ. ದೇವರು ನಮ್ಮ ಹಿಂದೆಯೇ ಇದ್ದಾನೆ. ಅವನು ನೋಡ್ತಾ ಇದ್ದಾನೆ. ಖಂಡಿತವಾಗಿ ಪದ್ಮರಾಜ್ ಗೆಲ್ತಾರೆ ಎಂದು ಹೇಳಿದರು.

ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕಾಂಗ್ರೆಸ್‌ನಿಂದ ವಕೀಲ ಪದ್ಮರಾಜ್ ರಾಮಯ್ಯ ಅವರು ಕಣದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments