Webdunia - Bharat's app for daily news and videos

Install App

ಪಾಗಲ್ ಪ್ರೇಮಿ ಚೂರಿ ಇರಿತ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಸಚಿವ

Webdunia
ಭಾನುವಾರ, 30 ಜೂನ್ 2019 (17:47 IST)
ಪಾಗಲ್ ಪ್ರೇಮಿಯಿಂದ ಪ್ರೇಯಸಿಯ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ದಾಖಲಾಗಿರುವ ಆಸ್ಪತ್ರೆಗೆ ಸಚಿವ ಭೇಟಿ ನೀಡಿದ್ದಾರೆ.

ಮಂಗಳೂರಿನಲ್ಲಿ ಪಾಗಲ್ ಪ್ರೇಮಿಯಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ‌ಭೇಟಿ ನೀಡಿದ್ದಾರೆ ಸಚಿವ ಯು.ಟಿ.ಖಾದರ್. ಸದ್ಯ ದೀಕ್ಷಾ ಶೇ.90ರಷ್ಟು ಪರವಾಗಿಲ್ಲ, ಇನ್ನೂ 48 ಗಂಟೆ ನಿಗಾದಲ್ಲಿ ಇಡಲಾಗಿದೆ. ಈ ಆಸ್ಪತ್ರೆಯ ವೈದ್ಯರು ದೀಕ್ಷಾಗೆ ಪುನರ್ಜನ್ಮ ನೀಡಿದ್ದಾರೆ. ಸದ್ಯ ಆಕೆ ನಮಗೆ ಎಲ್ಲವಕ್ಕೂ ಸ್ಪಂದನೆ ನೀಡುತ್ತಿದ್ದಾಳೆ. ಈ ಘಟನೆ ಅತ್ಯಂತ ದುರಾದೃಷ್ಟ ಮತ್ತು ನೋವಿನ ವಿಚಾರ ಅಂತ ಹೇಳಿದ್ರು.

ಚಿಕಿತ್ಸೆಗೆ ಸಂಬಂಧಿಸಿ ಎಲ್ಲಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಪ್ರಕರಣ ಸಂಬಂಧ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ಆರೋಪಿ ಸಿಕ್ಕರೂ ಘಟನೆ ಯಾಕಾಯ್ತು ಅನ್ನೋ ಬಗ್ಗೆ ಇಲಾಖೆ ಆತ್ಮಾವಲೋಕನ ಮಾಡಲಿ.
ಅಮಲು ಪದಾರ್ಥಕ್ಕೆ ಒಳಪಟ್ಟು ಆರೋಪಿ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ವೈದ್ಯರು ಕೂಡ ಮಾಹಿತಿ ನೀಡಿದ್ದಾರೆ ಎಂದರು.

ಇದಕ್ಕೆ ಸಂಬಂಧಿಸಿ ಡಿಸಿ, ಕಮಿಷನರ್ ಮತ್ತು ವೈದ್ಯರ ಸಭೆ ನಡೆಸುತ್ತೇನೆ. ಅಮಲು ಪದಾರ್ಥ ಬಳಕೆ ಹೆಚ್ಚಳ ಸಂಬಂಧಿಸಿ ಕ್ರಮದ ಬಗ್ಗೆ ಚರ್ಚಿಸಲಾಗುವುದು. ಆವತ್ತು ಘಟನೆ ನಡೆದಾಗ ಎಲ್ಲರೂ ವಿಡಿಯೋ ಮಾಡಿದ್ದಾರೆ. ಮೊಬೈಲ್ ಎಸೆದಿದ್ದರೂ ಅವನಿಗೆ ಭಯ ಆಗುತ್ತಿತ್ತು. ವಿಡಿಯೋ ಮಾಡೋ ಬದಲು ಧೈರ್ಯ ‌ಮತ್ತು ಮಾನವೀಯತೆ ಯಾಕೆ ಬರಲಿಲ್ಲ? ನಾನು ಆರೋಗ್ಯ ಸಚಿವನಾಗಿದ್ದಾಗ ಇದಕ್ಕೆ ಕಾಯ್ದೆಯನ್ನೇ ತಂದಿದ್ದೆ. ಈ ಸಂದರ್ಭ ಬದುಕಿಸಲು ಯತ್ನಿಸಿದ್ರೆ ಪ್ರಶಸ್ತಿ ಕೊಡುವ ಕಾಯ್ದೆ ತಂದಿದ್ದೇನೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments