Webdunia - Bharat's app for daily news and videos

Install App

Pahalgam Terror Attack: ತಾಯ್ನಾಡಿಗೆ ಸುರಕ್ಷಿತವಾಗಿ ಬಂದಿಳಿದ 178 ಕನ್ನಡಿಗರು

Sampriya
ಗುರುವಾರ, 24 ಏಪ್ರಿಲ್ 2025 (15:31 IST)
Photo Credit X
ಬೆಂಗಳೂರು:  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​​ನಲ್ಲಿ  ನಡೆದ ಭೀಕರ ಉಗ್ರ ದಾಳಿಯ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ 178 ಭಾರತೀಯರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಯಿತು.

ಗುರುವಾರ ಮಧ್ಯಾಹ್ನ 12.30 ರ ಸುಮಾರಿಗೆ ಕನ್ನಡಿಗರನ್ನು ಒಳಗೊಂಡ ವಿಮಾನ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ಉಗ್ರ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 28 ಮಂದಿಯ ಸಾವಿನ ಸುದ್ದಿ ಬರುತ್ತಿದ್ದ ಹಾಗೇ ಕರ್ನಾಟಕ ಸರ್ಕಾರ ಎರಡು ವಿಶೇಷ ತಂಡಗಳನ್ನು ಕಾಶ್ಮೀರಕ್ಕೆ ಕಳುಹಿಸಿಕೊಟ್ಟಿತ್ತು.

ಕಾರ್ಮಿಕ ಸಂತೋಷ್ ಅನಿಲ್ ಲಾಡ್ ನೇತೃತ್ವದಲ್ಲಿ ಕನ್ನಡಿಗರನ್ನು ವಾಪಸ್ ಕರೆತರುವ ಕಾರ್ಯಾಚರಣೆ ನಡೆಸಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಸಹ ಕಾಶ್ಮೀರದಲ್ಲಿ ರಕ್ಷಣಾ ತಂಡಕ್ಕೆ ಸಾಥ್ ನೀಡಿದ್ದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿ ಸಚಿವ ಸಂತೋಷ್​ ಲಾಡ್​, ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕನ್ನಡಿಗರು ಆಘಾತದಲ್ಲಿದ್ದರು. ದಾಳಿ ಬಳಿಕ ಯಾವಾಗ ಏನ್ ಬೇಕಾದರೂ ಆಗಬಹುದೆಂಬ ಭಯದಲ್ಲಿದ್ದರು.

ನಾನೇ 40ಕ್ಕೂ ಹೆಚ್ಚು ಸ್ಥಳಕ್ಕೆ ಭೇಟಿ ನೀಡಿ ಕನ್ನಡಿಗರ ಭೇಟಿಯಾದೆ. ಮಾಧ್ಯಮಗಳು ಪ್ರಸಾರ ಮಾಡಿದ ಸಹಾಯವಾಣಿ ಸಂಖ್ಯೆ ಹಾಗೂ ಮಾಹಿತಿ ಪಡೆದು ಅನೇಕರು ನಮ್ಮನ್ನು ಸಂಪರ್ಕಿಸಿದರು. ಎಲ್ಲರ ಸಹಕಾರದಿಂದ ಕನ್ನಡಿಗರನ್ನು ಕರೆತರುವುದು ಸಾಧ್ಯವಾಯಿತು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ, ಶಾಸಕ ವಿನಯ್ ಕುಲಕರ್ಣಿಗೆ ಇಡಿ ಶಾಕ್‌

ಉಗ್ರರನ್ನು ಹೇಗೆ ಸಾಯಿಸಬೇಕು ಅಂದ್ರೆ ನಮ್ಮ ಮುಖದಲ್ಲಿ ಬೆವರಿಳಿದ ಹಾಗೆ ಅವರಿಗೂ ಬೆವರು ಬರಬೇಕು: ಮಂಜುನಾಥ್ ಪತ್ನಿ

PM Narendra Modi: ಆ ಉಗ್ರರಿಗೆ ನಿರೀಕ್ಷೆಯೇ ಮಾಡಿರದ ಸಾವು ಕರುಣಿಸಲಿದ್ದೇವೆ: ಪ್ರಧಾನಿ ಮೋದಿ

Pehalgam: ಪುರಿ ದೇವಾಲಯದಲ್ಲೇ ಗರುಡ ನೀಡಿದ್ದನಾ ಪಹಲ್ಗಾಮ್ ದುರ್ಘಟನೆಯ ಸೂಚನೆ

Arecanut price today: ಇಂದಿನ ಅಡಿಕೆ, ಕಾಳುಮೆಣಸು ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments