Webdunia - Bharat's app for daily news and videos

Install App

Pahalgam, ಹಿಂದೂ ಮುಸ್ಲಿಂ ಮಧ್ಯೆ ಬೆಂಕಿ ಹಚ್ಚುವ ಮುನ್ನ ಬಿಜೆಪಿ ಇದಕ್ಕೆ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ ಸವಾಲು

Sampriya
ಶುಕ್ರವಾರ, 25 ಏಪ್ರಿಲ್ 2025 (15:34 IST)
Photo Credit X
ಬೆಂಗಳೂರು: ಸಾವಿನ ಮನೆಯಲ್ಲಿ ಸಂಭ್ರಮಾಚರಣೆ ಮಾಡಲು ಬಿಜೆಪಿಯಿಂದ ಮಾತ್ರ ಸಾಧ್ಯ.
ಭಯೋತ್ಪಾದಕ ದಾಳಿಗೆ, ಕೇಂದ್ರ ಸರ್ಕಾರದ ವೈಫಲ್ಯಕ್ಕೆ ದೇಶದ ಮುಂದೆ ತಲೆ ತಗ್ಗಿಸಿ ನಿಲ್ಲಬೇಕಿದ್ದ ಬಿಜೆಪಿ ನೀಚಾತಿನೀಚ ರಾಜಕಾರಣಕ್ಕೆ ಮುಂದಾಗಿರುವುದು ಈ ದೇಶದ ದುರ್ದೈವ ಎಂದು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ದೂರಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸಾವಿನ ಮನೆಯಲ್ಲಿ ಸಂಭ್ರಮಾಚರಣೆ ಮಾಡಲು ಬಿಜೆಪಿಯಿಂದ ಮಾತ್ರ ಸಾಧ್ಯ.
ಭಯೋತ್ಪಾದಕ ದಾಳಿಗೆ, ಕೇಂದ್ರ ಸರ್ಕಾರದ ವೈಫಲ್ಯಕ್ಕೆ ದೇಶದ ಮುಂದೆ ತಲೆ ತಗ್ಗಿಸಿ ನಿಲ್ಲಬೇಕಿದ್ದ ಬಿಜೆಪಿ ನೀಚಾತಿನೀಚ
ರಾಜಕಾರಣಕ್ಕೆ ಮುಂದಾಗಿರುವುದು ಈ ದೇಶದ ದುರ್ದೈವ.

Divert and rule ತಂತ್ರ ಹೂಡಿದರೆ ನಿಮ್ಮ ವೈಫಲ್ಯಗಳನ್ನು ದೇಶದ ಜನತೆ ಮರೆಯುವುದಿಲ್ಲ @BJP4Karnataka
,

ಗಡಿಯಿಂದ ನೂರಾರು ಕಿ.ಮಿ ದೂರದಲ್ಲಿರುವ ಪೆಹಲ್ಗಾಮ್ ಗೆ ಉಗ್ರರು ನುಸುಳಿ ಬಂದಿದ್ದು ಹೇಗೆ?
ಒಂದು ತಿಂಗಳ ಹಿಂದೆಯೇ ಉಗ್ರರ ಸುಳಿವಿದ್ದರೂ ನಿರ್ಲಕ್ಷಿಸಿದ್ದೇಕೆ?
ಇಂಟೆಲಿಜೆನ್ಸ್ ವೈಫಲ್ಯವಾಗಿದ್ದೇಕೆ?
ಪೆಹಲ್ಗಾಮ್ ನಲ್ಲಿ ಭದ್ರತೆ ನಿಯೋಜಿಸುವಲ್ಲಿ ನಿರ್ಲಕ್ಷ್ಯ ಮಾಡಿದ್ದೇಕೆ?
ಅಮರಾನಾಥ್ ಬೇಸ್ ಕ್ಯಾಂಪ್ ಎನಿಸಿಕೊಂಡಿರುವ ಪ್ರದೇಶದಲ್ಲಿ ಒಬ್ಬನೇ ಒಬ್ಬ ಯೋಧನನ್ನೂ ನಿಯೋಜಿಸದಿರುವುದೇಕೆ?
ಹಿಂದೂ ಮುಸ್ಲಿಂ ಬೆಂಕಿ ಹಚ್ಚುವ ಮುನ್ನ ಬಿಜೆಪಿ ಉತ್ತರಿಸಬೇಕಾದ ಪ್ರಶ್ನೆಗಳಿವು.
ಕಿಂಚಿತ್ ಶೋಕವೂ ಇಲ್ಲದೆ ಬಿಹಾರದಲ್ಲಿ ನಿತೀಶ್ ಅವರೊಂದಿಗೆ ವೇದಿಕೆಯಲ್ಲಿ ನಗೆ ಚಟಾಕಿ ಹಾರಿಸಿದ ಮೋದಿಯವರನ್ನದರೂ ಕೇಳಿ ಉತ್ತರ ಹೇಳಿ.

ಪೆಹಲ್ಗಾಮ್ ಪ್ರವಾಸದಲ್ಲಿದ್ದ ಪ್ರತ್ಯಕ್ಷದರ್ಶಿಯ ಫೋಟೋ ಇಟ್ಟುಕೊಂಡು ಕೊಳಕು ರಾಜಕೀಯಕ್ಕೆ ಮುಂದಾದ ಬಿಜೆಪಿಗೆ ಸತ್ಯವೆಂದರೆ ಅಲರ್ಜಿ, ಏಕೆಂದರೆ ಸುಳ್ಳೇ ಅವರ ಮನೆದೇವರು.
ಸತ್ಯವನ್ನು ಪಕ್ಷ, ಜಾತಿ, ಧರ್ಮಗಳಿಂದ ಅಳೆಯಲು ಸಾಧ್ಯವೇ?
ಸತ್ಯವನ್ನು ಕಾಂಗ್ರೆಸ್ ನವರು ಹೇಳಿದರೂ ಸತ್ಯವೇ, ಬಿಜೆಪಿಯವರು ಹೇಳಿದರೂ ಸತ್ಯವೇ.
ನಿಮ್ಮದೇ ಯುವ ಮೋರ್ಚಾದ ಮುಖಂಡ ಹಾಗೂ ಆರ್ಎಸ್ಎಸ್ ಕಾರ್ಯಕರ್ತ ಅರವಿಂದ್ ಅಗರ್ವಾಲ್ ಕೂಡ ಸ್ಥಳೀಯ ಮುಸ್ಲಿಮರು ತಮ್ಮ ಜೀವ ಪಣಕ್ಕಿಟ್ಟು ನನ್ನನ್ನು ರಕ್ಷಿಸಿದ್ದಾರೆ, ಅವರ ಋಣ ತೀರಿಸಲಾಗದು ಎಂದಿದ್ದಾರೆ, ಬಿಜೆಪಿಯವರು ಕನಿಷ್ಠ ಅವರದೇ ಪಕ್ಷದವರ ಮಾತನ್ನಾದರೂ ಕೇಳಲಿ.

ಎಲ್ಲಾ ಧರ್ಮದಲ್ಲೂ ಹಾದಿ ತಪ್ಪಿದವರಿದ್ದಾರೆ, ಮಾನವೀಯತೆಯನ್ನು ಕಳೆದುಕೊಂಡವರಿದ್ದಾರೆ, ಹಿಂದೂ ಧರ್ಮದಲ್ಲಿ ಹೇಗೆ ಬಿಜೆಪಿ, ಆರ್ಎಸ್ಎಸ್ ಸೇರಿ ಮನುಷ್ಯತ್ವ ಬಿಟ್ಟಿದ್ದಾರೋ ಅಂತೆಯೇ ಮುಸ್ಲಿಂ ಧರ್ಮದಲ್ಲೂ ಕೂಡ..

ದಾಳಿ ನಡೆದಾಗ ಪ್ರವಾಸಿಗರ ನೆರವಿಗೆ ಧಾವಿಸಿದ್ದು ಅಲ್ಲಿನ ಸ್ಥಳೀಯರು, ಧೈರ್ಯ ತುಂಬಿ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿ ಆರೈಕೆ ಮಾಡಿದವರ ಮಾನವೀಯತೆಯನ್ನು ಅವಮಾಸುವ ಬಿಜೆಪಿ ಅತ್ಯಂತ ನಿರ್ಲಜ್ಜ ಸ್ಥಿತಿಗೆ ತಲುಪಿದೆ.

ಘಟನೆಯಲ್ಲಿ ಜೀವ ತೆತ್ತ ಕರ್ನಾಟಕದ ಭರತ್ ಅವರ ಪತ್ನಿಯವರ ಸತ್ಯ ನುಡಿಯಿಂದ, ಸ್ವತಃ ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತನ ಮಾತಿನಿಂದ, ಸ್ಥಳೀಯರ ಮಾನವೀಯತೆಯನ್ನು ಕೊಂಡಾಡಿದ ಶಿವಮೊಗ್ಗದ ಮಂಜುನಾಥ್ ಅವರ ಪತ್ನಿ ಪಲ್ಲವಿಯವರ ಮಾತಿನಿಂದಲಾದರೂ ಬಿಜೆಪಿಗೆ ಸದ್ಬುದ್ದಿ ಬರುವಂತಾಗಲಿ.

BTW, when is PM Modi visiting Kashmir?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಪಾಕ್‌ನ ಹೆಡೆಮುರಿ ಕಟ್ಟಬಹುದು, ಆದ್ರೆ ಕಾಂಗ್ರೆಸ್‌ನ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ‌: ಅಶೋಕ್‌

ಕರ್ನಾಟಕದಲ್ಲಿರುವ ಎಲ್ಲಾ ಪಾಕಿಸ್ತಾನ ಪ್ರಜೆಗಳಿಗೂ ಗೇಟ್ ಪಾಸ್: ಜಿ ಪರಮೇಶ್ವರ್

Medha Patkar: 25 ವರ್ಷದ ಹಿಂದಿನ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಅರೆಸ್ಟ್‌

CET ಬರೆಯಲು ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರದ ನಡೆ ವಿರುದ್ಧ ದೂರು ಕೊಟ್ಟ ಅಶೋಕ್‌

ಮುಂದಿನ ಸುದ್ದಿ
Show comments