Webdunia - Bharat's app for daily news and videos

Install App

ಜಂಬೂಸವಾರಿ ಮೆರವಣಿಗೆ ರಂಗು ನೀಡಿದ ಸ್ತಬ್ದಚಿತ್ರಗಳು

Webdunia
ಶನಿವಾರ, 30 ಸೆಪ್ಟಂಬರ್ 2017 (16:04 IST)
ಮೈಸೂರು: ಜಂಬೂಸವಾರಿ ದಸರಾದ ಪ್ರಮುಖ ಆಕರ್ಷಣೆ. ರಾಜ್ಯದ ಐತಿಹಾಸಿಕ ಹಿನ್ನೆಲೆ, ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿ ಬಿಂಬಿಸುವ ಸ್ತಬ್ದಚಿತ್ರಗಳು ಎಲ್ಲರನ್ನ ಆಕರ್ಷಿಸುತ್ತಿವೆ.

ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ 40 ಸ್ತಬ್ದ ಚಿತ್ರಗಳು ಸಾಗುತ್ತಿವೆ. ಕಲೆ, ಸಂಸ್ಕೃತಿ ಜತೆಗೆ ಪರಿಸರ, ಅರಣ್ಯೀಕರಣ, ಅಂತರ್ಜಲ, ಪರಿಸರ ಸ್ನೇಹಿ, ಪ್ರವಾಸೋದ್ಯಮ ಹಾಗೂ ರಾಜ್ಯ ಸರ್ಕಾರದ ವಿಶೇಷ ಸಾಧನೆ ಬಿಂಬಿಸುವ ಸ್ತಬ್ದ ಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿವೆ.

ನಿಶಾನೆ ಆನೆ ಬಲರಾಮ ಜಂಬೂಸವಾರಿ ಮೆರವಣಿಗೆ ಸಾಗಬೇಕಾದ ದಿಕ್ಕನ್ನು ಸೂಚಿಸುತ್ತಾ ಮುಂಚೂಣಿಯಲ್ಲಿ ಸಾಗುತ್ತಿದ್ದಾನೆ. ಚಿತ್ತಾಕರ್ಷಕ ಅಲಂಕಾರದೊಂದಿಗೆ ಕಂಗೊಳಿಸುತ್ತಾ ಸಾಗುತ್ತಿರುವ ಗಜಪಡೆ ಜಂಬೂಸವಾರಿ ಮೆರವಣಿಗೆಗೆ ಮೆರುಗು ತಂದಿವೆ. ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಯಲ್ಲಿ ವೀಕ್ಷಿಸಲು ಜನಸ್ತೋಮ ಕಿಕ್ಕಿರಿದು ನೆರೆದಿದೆ.

ಮೆರವಣಿಗೆ ಸಾಗುತ್ತಿರುವ ಮಾರ್ಗದುದ್ದಕ್ಕೂ ಸಾವಿರಾರು ಪೊಲೀಸರು ಬಂದೋಬಸ್ತ್ ಒದಗಿಸಿದ್ದಾರೆ. ಇನ್ನು ಮೆರವಣಿಗೆ ವೀಕ್ಷಿಸುವ ಸಲುವಾಗಿ ರಸ್ತೆಯ ಇಕ್ಕೆಲಗಳಲ್ಲಿರುವ ಎತ್ತರವಾದ ಕಟ್ಟಡಗಳು, ಜಾಹಿರಾತು ಫಲಕಗಳು, ಮರಗಳ ಮೇಲೆ ಜನ ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments