Webdunia - Bharat's app for daily news and videos

Install App

ದಾವಣಗೆರೆಯಲ್ಲಿ ಹಿಂದೂ ಹೆಸರಿನಲ್ಲಿ ನೆಲೆಸಿದ್ದ ಪಾಕಿಸ್ತಾನ ಕುಟುಂಬ ವಶಕ್ಕೆ

Sampriya
ಬುಧವಾರ, 2 ಅಕ್ಟೋಬರ್ 2024 (16:36 IST)
ಬೆಂಗಳೂರು: ಆನೇಕಲ್​ ತಾಲೂಕಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆಯ ಕುಟುಂಬವನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಇದೀಗ ದಾವಣಗೆರೆಯಲ್ಲಿ ಹಿಂದೂಗಳ ಹೆಸರಿಟ್ಟುಕೊಂಡು ನೆಲೆಸಿದ್ದ ಪಾಕ್ ಪ್ರಜೆಗಳನ್ನು ಬಂಧನ ಮಾಡಲಾಗಿದೆ.

ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ಮೂಲದ ಕುಟುಂಬವನ್ನು ಬಂಧಿಸಲಾಗಿದೆ. ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದೂಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ದಾವಣಗೆರೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮೂಲದ ಫಾತಿಮಾ ಅಲ್ಲಿ ಅಲ್ತಾಫ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಉಳಿದಂತೆ, ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹನೀಫ್ ಕೂಡ ಪಾಕಿಸ್ತಾನದವನಾಗಿದ್ದು ಹನೀಫ್ ಸೊಸೆ, ಮಗಳು, ಅಳಿಯನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿಯಾಗಿದ್ದಾನೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಪುತ್ರ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments