Webdunia - Bharat's app for daily news and videos

Install App

ಭಾರತದ ವಿರುದ್ಧ ಕದನ ವಿರಾಮಕ್ಕೆ ಪಾಕಿಸ್ತಾನ ಸಹಾಯ ಕೇಳಿದ್ದು ಯಾರನ್ನು ಎಂಬ ಗುಟ್ಟು ಬಯಲು

Krishnaveni K
ಶುಕ್ರವಾರ, 20 ಜೂನ್ 2025 (14:47 IST)
ನವದೆಹಲಿ: ಭಾರತದ ವಿರುದ್ಧ ಸಂಘರ್ಷದ ಸಮಯದಲ್ಲಿ ಕದನ ವಿರಾಮಕ್ಕೆ ಮೊದಲು ಮನವಿ ಮಾಡಿದ್ದು ನಾವೇ ಎಂದು ಸ್ವತಃ ಪಾಕಿಸ್ತಾನ ಈಗ ಒಪ್ಪಿಕೊಂಡಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಎರಡು ದಿನಗಳ ಕದನದ ಬಳಿಕ ಎರಡೂ ದೇಶಗಳ ನಡುವೆ ಕದನ ವಿರಾಮವೇರ್ಪಟ್ಟಿತ್ತು.

ಇದಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾನೇ ಕಾರಣ ಎಂದು ಹೇಳಿಕೊಳ್ಳುತ್ತಿದ್ದರು. ನಾನು ಹೇಳಿದ್ದಕ್ಕೇ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿದ್ದವು ಎಂದಿದ್ದರು. ಆದರೆ ಭಾರತ ಮಾತ್ರ ನಾವು ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಅವಕಾಶ ಕೊಡುವುದಿಲ್ಲ. ನೇರವಾಗಿ ಪಾಕಿಸ್ತಾನದಿಂದ ಪ್ರಸ್ತಾಪ ಬಂದಿದ್ದಕ್ಕೇ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಾಗಿ ಹೇಳಿದ್ದರು.

ಇದೀಗ ಸ್ವತಃ ಪಾಕಿಸ್ತಾನವೇ ನಾವೇ ಕದನ ವಿರಾಮಕ್ಕೆ ಆಹ್ವಾನ ನೀಡಿದ್ದು ಎಂದು ಒಪ್ಪಿಕೊಂಡಿದೆ. ಸ್ವತಃ ಪಾಕ್ ಉಪ ಪ್ರಧಾನಿ ಇಶಾಕ್ ದಾರ್ ಇದನ್ನು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ.

ಭಾರತೀಯ ಕ್ಷಿಪಣಿಗಳು ನಮ್ಮ ವಾಯನೆಲೆಗಳನ್ನು ಧ್ವಂಸಗೊಳಿಸಿದಾಗ ಸೌದಿ ಅರೇಬಿಯಾ ಮೂಲಕ ಭಾರತದ ಮನವೊಲಿಸಲು ಪ್ರಯತ್ನ ನಡೆಯಿತು. ನಮ್ಮ ಮೇಲೆ ಭಾರತ ತ್ವರಿತವಾಗಿ ದಾಳಿ ನಡೆಸಿತು. ನಮಗೆ ಯೋಚನೆ ಮಾಡಲೂ ಸಮಯ ಸಿಕ್ಕಿರಲಿಲ್ಲ. ಭಾರತದ ತ್ವರಿತ ದಾಳಿ ನಮಗೆ ಅನಿರೀಕ್ಷಿತವಾಗಿತ್ತು. ಈ ಸಮಯದಲ್ಲಿ ಮೊದಲು ಸೌದಿ ಅರೇಬಿಯಾ ದೊರೆ ಫೈಸಲ್ ಬಿನ್ ಸಲ್ಮಾನ್ ಗೆ ಕರೆ ಮಾಡಿ ಭಾರತದ ಮನವೊಲಿಸಲು ಸಾಧ್ಯವೇ ಎಂದು ಕೇಳಿಕೊಳ್ಳಲಾಯಿತು. ಬಳಿಕ ಅಮೆರಿಕಾ ಬಳಿಯೂ ಮಧ್ಯಸ್ಥಿಕೆಗೆ ಮನವಿ ಮಾಡಿದೆವು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments