Webdunia - Bharat's app for daily news and videos

Install App

ಪಾಕ್ ಪರ ಘೋಷಣೆ ಕೂಗಿಯೇ ಇಲ್ಲ ಎಂದ ಕಾಂಗ್ರೆಸ್: ಸದನದಲ್ಲಿ ಆರ್. ಅಶೋಕ್ ಆಕ್ರೋಶ

Krishnaveni K
ಬುಧವಾರ, 28 ಫೆಬ್ರವರಿ 2024 (10:41 IST)
Photo Courtesy: Twitter
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿಚಾರ ಇಂದು ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ವಿಧಾನಪರಿಷತ್ ನಲ್ಲಿ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಮತ್ತು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಘಟನೆ ಬಗ್ಗೆ ಪ್ರಸ್ತಾಪಿಸಿದರು. ಈ ವೇಳೆ ಆಡಳಿತಾರೂಢ ಕಾಂಗ್ರೆಸ್ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು.

ವಿಧಾನಪರಿಷತ್ ನಲ್ಲಿ ಕೋಟಾ ಶ್ರೀನಿವಾಸ್ ವಿಷಯ ಪ್ರಸ್ತಾಪಿಸುತ್ತಿದ್ದಂತೇ ಮಧ್ಯಪ್ರವೇಶಿಸಿದ ಸಚಿವ ಎಚ್.ಕೆ. ಪಾಟೀಲ್, ಪಾಕ್ ಪರ ಯಾರೂ ಘೋಷಣೆ ಕೂಗಿಲ್ಲ. ಇಂತಹದ್ದೊಂದು ವಿಷಯವನ್ನು ಸುಳ್ಳು ಸೃಷ್ಟಿ ಮಾಡಿ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.  ಆದರೆ ಇದು ಬಿಜೆಪಿ ಸದಸ್ಯರನ್ನು ತೀವ್ರ ಕೆರಳಿಸಿತು. ಎರಡೂ ಸದಸ್ಯರ ಗದ್ದಲದಿಂದಾಗಿ ಸಭಾಪತಿ ಹೊರಟ್ಟಿ ಸದನ ಮುಂದೂಡಬೇಕಾಯಿತು.

ಇನ್ನೊಂದೆಡೆ ವಿಧಾನಸಭೆಯಲ್ಲೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ಘಟನೆ ಬಗ್ಗೆ ಪ್ರಸ್ತಾಪಿಸಿದಾಗ ಕಾಂಗ್ರೆಸ್ ಸದಸ್ಯರಾದ ಪ್ರಿಯಾಂಕ್ ಖರ್ಗೆ, ಜಮೀರ್ ಅಹಮ್ಮದ್ ಮುಂತಾದವರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಇಂತಹವರಿಗೆ ರೆಡ್ ಕಾರ್ಪೆಟ್ ಹಾಕಿ ಸದನಕ್ಕೆ ಬರಲು ಅವಕಾಶ ಕೊಟ್ಟಿದ್ದು ಯಾರು? ಅವರನ್ನು ವೆಹಿಕಲ್ ಮಾಡಿ ಇಲ್ಲಿಂದ ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟವರು ಯಾರು ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ವೇಳೆ ಸ್ಪೀಕರ್ ಎರಡೂ ಕಡೆಯ ಸದಸ್ಯರನ್ನು ಸುಮ್ಮನಾಗಿಸಲು ಹರಸಾಹಸ ಪಡಬೇಕಾಯಿತು. ಆದರೆ ಇದೆಲ್ಲದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನೇ ಕೂತಿದ್ದು ಕಂಡುಬಂತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments