Webdunia - Bharat's app for daily news and videos

Install App

ಹಿಂದೂ ಹೆಸರಿಟ್ಟುಕೊಂಡಿದ್ದ ಪಾಕಿಸ್ತಾನಿಯರು ಬಂಧನವಾಗಿದ್ದೇ ರೋಚಕ ಕಹಾನಿ

Krishnaveni K
ಮಂಗಳವಾರ, 1 ಅಕ್ಟೋಬರ್ 2024 (11:33 IST)
ಬೆಂಗಳೂರು: ಆನೇಕಲ್ ನಲ್ಲಿ ಹಿಂದೂ ಹೆಸರಿಟ್ಟುಕೊಂಡಿದ್ದ ಪಾಕಿಸ್ತಾನಿ ಮುಸ್ಲಿಮ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಗುರುತು ಪತ್ತೆಯಾಗಿದ್ದರ ಹಿಂದೆ ಚೆನ್ನೈನ ಕನೆಕ್ಷನ್ ಇದೆ.

ಇವರಲ್ಲಿ ಓರ್ವ ಶಂಕರ್ ಶರ್ಮ ಎಂದು ಹೆಸರಿಟ್ಟುಕೊಂಡು ಹಲವು ಸಮಯದಿಂದ ಇಲ್ಲಿ ವಾಸ ಮಾಡುತ್ತಿದ್ದ. 10 ವರ್ಷಗಳ ಹಿಂದೆ ಈತ ಬಾಂಗ್ಲಾ ಮಾರ್ಗವಾಗಿ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದರು. ಈತನ ಜೊತೆಗೆ ಇನ್ನೂ ಮೂವರಿದ್ದರು. ಇಲ್ಲಿಯೇ ನಕಲಿ ಗುರುತಿನ ಚೀಟಿ ಮಾಡಿಸಿಕೊಂಡು ಹಿಂದೂಗಳ ಸೋಗಿನಲ್ಲಿ ಬದುಕುತ್ತಿದ್ದರು.

ಈತನ ಸಹಚರರಿಬ್ಬರು ಇತ್ತೀಚೆಗೆ ಚೆನ್ನೈನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹೀಗಾಗಿ ಇಲ್ಲಿರುವವರ ಸುಳಿವು ಪೊಲೀಸರಿಗೆ ಸಿಕ್ಕಿತ್ತು. ಭಾರತಕ್ಕೆ ಬಂದ ಬಳಿಕ ಇಲ್ಲಿನ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಎಲ್ಲವನ್ನೂ ಮಾಡಿಸಿಕೊಂಡಿದ್ದರು. ಇವರಿಗೆ ನಕಲಿ ಗುರುತಿನ ಚೀಟಿ ಮಾಡಿಸಿಕೊಡಲು ಸಹಾಯ ಮಾಡಿದವರಿಗಾಗಿ ಈಗ ತಲಾಷ್ ನಡೆದಿದೆ.

ಶಂಕರ್ ಶರ್ಮಾ ಎಂದು ಹೆಸರಿಟ್ಟುಕೊಂಡಿದ್ದವನ ಮೂಲ ಹೆಸರು ರಶೀದ್. ಈತನ ಮನೆ ಶೋಧಿಸಿದಾಗ ಒಳಗೆ ಮುಸ್ಲಿಂ ಬರಹ, ಪುಸ್ತಕಗಳು, ಫೋಟೋಗಳು ಸಿಕ್ಕಿವೆ. ವಿಚಾರಣೆ ನಡೆಸಿದಾಗ ಮನೆಯವರೆಲ್ಲರೂ ಮೂಲತಃ ಪಾಕಿಸ್ತಾನಿಯರು ಎಂದು ಖಚಿತವಾಗಿದೆ. ಇದೀಗ ಜಿಗಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments