Webdunia - Bharat's app for daily news and videos

Install App

ಹಿಂದೂ ಹೆಸರಿಟ್ಟುಕೊಂಡಿದ್ದ ಪಾಕಿಸ್ತಾನಿಯರು ಬಂಧನವಾಗಿದ್ದೇ ರೋಚಕ ಕಹಾನಿ

Krishnaveni K
ಮಂಗಳವಾರ, 1 ಅಕ್ಟೋಬರ್ 2024 (11:33 IST)
ಬೆಂಗಳೂರು: ಆನೇಕಲ್ ನಲ್ಲಿ ಹಿಂದೂ ಹೆಸರಿಟ್ಟುಕೊಂಡಿದ್ದ ಪಾಕಿಸ್ತಾನಿ ಮುಸ್ಲಿಮ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಗುರುತು ಪತ್ತೆಯಾಗಿದ್ದರ ಹಿಂದೆ ಚೆನ್ನೈನ ಕನೆಕ್ಷನ್ ಇದೆ.

ಇವರಲ್ಲಿ ಓರ್ವ ಶಂಕರ್ ಶರ್ಮ ಎಂದು ಹೆಸರಿಟ್ಟುಕೊಂಡು ಹಲವು ಸಮಯದಿಂದ ಇಲ್ಲಿ ವಾಸ ಮಾಡುತ್ತಿದ್ದ. 10 ವರ್ಷಗಳ ಹಿಂದೆ ಈತ ಬಾಂಗ್ಲಾ ಮಾರ್ಗವಾಗಿ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದರು. ಈತನ ಜೊತೆಗೆ ಇನ್ನೂ ಮೂವರಿದ್ದರು. ಇಲ್ಲಿಯೇ ನಕಲಿ ಗುರುತಿನ ಚೀಟಿ ಮಾಡಿಸಿಕೊಂಡು ಹಿಂದೂಗಳ ಸೋಗಿನಲ್ಲಿ ಬದುಕುತ್ತಿದ್ದರು.

ಈತನ ಸಹಚರರಿಬ್ಬರು ಇತ್ತೀಚೆಗೆ ಚೆನ್ನೈನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹೀಗಾಗಿ ಇಲ್ಲಿರುವವರ ಸುಳಿವು ಪೊಲೀಸರಿಗೆ ಸಿಕ್ಕಿತ್ತು. ಭಾರತಕ್ಕೆ ಬಂದ ಬಳಿಕ ಇಲ್ಲಿನ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಎಲ್ಲವನ್ನೂ ಮಾಡಿಸಿಕೊಂಡಿದ್ದರು. ಇವರಿಗೆ ನಕಲಿ ಗುರುತಿನ ಚೀಟಿ ಮಾಡಿಸಿಕೊಡಲು ಸಹಾಯ ಮಾಡಿದವರಿಗಾಗಿ ಈಗ ತಲಾಷ್ ನಡೆದಿದೆ.

ಶಂಕರ್ ಶರ್ಮಾ ಎಂದು ಹೆಸರಿಟ್ಟುಕೊಂಡಿದ್ದವನ ಮೂಲ ಹೆಸರು ರಶೀದ್. ಈತನ ಮನೆ ಶೋಧಿಸಿದಾಗ ಒಳಗೆ ಮುಸ್ಲಿಂ ಬರಹ, ಪುಸ್ತಕಗಳು, ಫೋಟೋಗಳು ಸಿಕ್ಕಿವೆ. ವಿಚಾರಣೆ ನಡೆಸಿದಾಗ ಮನೆಯವರೆಲ್ಲರೂ ಮೂಲತಃ ಪಾಕಿಸ್ತಾನಿಯರು ಎಂದು ಖಚಿತವಾಗಿದೆ. ಇದೀಗ ಜಿಗಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments