Webdunia - Bharat's app for daily news and videos

Install App

ತೇಜಸ್ವಿ ಸೂರ್ಯ-ಶಿವಶ್ರೀ ರಿಸೆಪ್ಷನ್‌ಗೆ ಅರಮನೆ ಮೈದಾನ ಸಜ್ಜು: ಡ್ರೈಫ್ರೋಟ್ಸ್‌, ಬೊಕ್ಕೆ ಅವಕಾಶವಿಲ್ಲ ಎಂದ ಸಂಸದ

Sampriya
ಭಾನುವಾರ, 9 ಮಾರ್ಚ್ 2025 (10:50 IST)
Photo Courtesy X
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿಸೂರ್ಯ ಹಾಗೂ ಕಲಾವಿದೆ ಶಿವಶ್ರೀ ಅವರು ಈಚೆಗೆ ಹಸೆಮಣೆಗೆ ಕಾಲಿಟ್ಟಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಆರತಕ್ಷತೆ ನಡೆಯಲಿದೆ.

ಬೆಂಗಳೂರು ಕನಕಪುರದ ರೆಸಾರ್ಟ್‌ನಲ್ಲಿ ಮಾರ್ಚ್ 5 ಹಾಗೂ 6 ರಂದು ತೇಜಸ್ವಿ-ಶಿವಶ್ರೀ ವಿವಾಹ ಸಮಾರಂಭ ನಡೆದಿತ್ತು. ಇದಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು, ರಾಜಕೀಯ ಗಣ್ಯರಿಗಷ್ಟೇ ಆಹ್ವಾನ ನೀಡಲಾಗಿತ್ತು.

ಬೆಂಗಳೂರಿನ ಅರಮನೆ ಮೈದಾನದ ವೃಕ್ಷ, ಗಾಯತ್ರಿ ವಿಹಾರ, ಪ್ಯಾಲೇಸ್‌ ಮೈದಾನದಲ್ಲಿ ರಿಸೆಪ್ಷನ್ ನಡೆಯಲಿದೆ. ಆರತಕ್ಷತೆಗೆ ಅಭಿಮಾನಿಗಳಿಗೆ ತೇಜಸ್ವಿ ಸೂರ್ಯ ಅವರು ಆಹ್ವಾನ ನೀಡಿದ್ದು, ಇದರ ಜೊತೆಗೆ ಒಂದು ವಿಶೇಷ ಮನವಿಯನ್ನೂ ಮಾಡಿದ್ದಾರೆ.

ಭಾರತದಲ್ಲಿ ಪ್ರತಿವರ್ಷ ನಡೆಯುವ 1 ಕೋಟಿಗೂ ಅಧಿಕ ಮದುವೆ ಸಮಾರಂಭಗಳಲ್ಲಿ ಶೇ 85 ರಷ್ಟು ಹೂವುಗಳು & ಬೊಕ್ಕೆಗಳು ಕೇವಲ 24 ಘಂಟೆಗಳಲ್ಲಿ ನಿಷ್ಕ್ರಿಯವಾಗುತ್ತವೆ. ವರ್ಷಕ್ಕೆ ಏನಿಲ್ಲವೆಂದರೂ 300000 ಕೆಜಿ ಯಷ್ಟು ಡ್ರೈ ಫ್ರೂಟ್ಸ್‌ ಗಳೂ ಮದುವೆ ನಡೆಯುವ ಸ್ಥಳದಲ್ಲಿಯೇ ಉಳಿದು ಹೋಗುತ್ತವೆ. ಇದರಿಂದ ವಾರ್ಷಿಕ ₹315 ಕೋಟಿ ಮೊತ್ತದ ಹಣ ಅನವಶ್ಯಕವಾಗಿ ವೆಚ್ಚವಾಗುತ್ತದೆ.

ನನ್ನ ಆರತಕ್ಷತೆ ಕಾರ್ಯಕ್ರಮಕ್ಕೆ ಹೂ ಬೊಕ್ಕೆಗಳು, ಡ್ರೈ ಫ್ರೂಟ್ಸ್‌ ಗಳನ್ನು ದಯವಿಟ್ಟು ತರಬೇಡಿ ಎಂದು ತಮ್ಮಲ್ಲಿ ವಿನಂತಿಸುತ್ತೇನೆ. ಆರತಕ್ಷತೆಗೆ ಬರುವ ಹಿರಿಯ ನಾಗರಿಕರು ಮತ್ತು ದಿವ್ಯಾಂಗ ವ್ಯಕ್ತಿಗಳಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments