Select Your Language

Notifications

webdunia
webdunia
webdunia
webdunia

ವಿಜಯೇಂದ್ರಗೆ ಪರಿಷತ್ ಟಿಕೆಟ್ ನಿರಾಕರಣೆ?

ವಿಜಯೇಂದ್ರಗೆ ಪರಿಷತ್ ಟಿಕೆಟ್ ನಿರಾಕರಣೆ?
ಬೆಂಗಳೂರು , ಮಂಗಳವಾರ, 24 ಮೇ 2022 (10:16 IST)
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕೊನೆಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಹೈ ಕಮಾಂಡ್ ನಿರಾಕರಿಸುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪಗೆ ಶಾಕ್ ನೀಡಿದೆ. ಕುಟುಂಬ ರಾಜರಾಕರಣಕ್ಕೆ ಹೈಕಮಾಂಡ್ ಮನ್ನಣೆ ನೀಡಿಲ್ಲ. 

ಲಿಂಗಾಯತ ಕೋಟಾದಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರಾಗಿರುವ ಧಾರವಾಡದ ಲಿಂಗರಾಜ್ ಪಾಟೀಲ್, ಮಹಿಳಾ ಹಾಗೂ ಒಕ್ಕಲಿಗ ಕೋಟಾದಲ್ಲಿ ಶಿವಮೊಗ್ಗ ಮೂಲದ ಸಿ. ಮಂಜುಳಾ, ದಲಿತ ಕೋಟಾದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹಾಗೂ ಒಬಿಸಿ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಕೇಶವ ಪ್ರಸಾದ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ವಿಧಾನ ಪರಿಷತ್ಗೆ ಪ್ರವೇಶ ಪಡೆದು ಸಚಿವ ಸಂಪುಟದಲ್ಲಿ ಅವಕಾಶ ಪಡೆಯುತ್ತಾರೆ ಎಂದೇ ಹೇಳಾಗುತ್ತಿದ್ದ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದೇ ಹೈ ಕಮಾಂಡ್ ನಿರಾಸೆ ಮಾಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್ ಬುಕ್ ಸೆಲ್ಫೀಯಿಂದ ಸಿಕ್ಕಿಬಿದ್ದ ಕೊಲೆಗಾರ