Select Your Language

Notifications

webdunia
webdunia
webdunia
webdunia

ದಕ್ಷಿಣ ಭಾರತದ ಪಪ್ಪು ಉದಯನಿಧಿ ಸ್ಟಾಲಿನ್- ಅಣ್ಣಾಮಲೈ

ದಕ್ಷಿಣ ಭಾರತದ ಪಪ್ಪು ಉದಯನಿಧಿ ಸ್ಟಾಲಿನ್- ಅಣ್ಣಾಮಲೈ
ತಮಿಳುನಾಡು , ಬುಧವಾರ, 6 ಸೆಪ್ಟಂಬರ್ 2023 (16:54 IST)
ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿ ಮೋದಿ ಸಮುದಾಯದ ಬಗ್ಗೆ ಮಾತನಾಡಿದಂತೆ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಮಾತನಾಡಿದ್ದಾರೆ. ಈ ಹಿನ್ನೆಲೆ ರಾಹುಲ್ ಗಾಂಧಿ ಉತ್ತರ ಭಾರತದ ಪಪ್ಪು ಆದ್ರೆ, ದಕ್ಷಿಣ ಭಾರತದ ಪಪ್ಪು ಉದಯನಿಧಿ ಸ್ಟಾಲಿನ್ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ. ಅವರು ಹೀಗೆಯೇ ಮಾತನಾಡುತ್ತಾ ಹೋದರೆ ‘I.N.D.I.A’ ಮೈತ್ರಿಕೂಟದ ಮತಬ್ಯಾಂಕ್ ಕುಸಿಯುತ್ತಲೇ ಹೋಗುತ್ತದೆ. ಈಗ ‘I.N.D.I.A’ ಮೈತ್ರಿಕೂಟದ ಮತಗಳ ಪ್ರಮಾಣ ಶೇಕಡಾ ಐದಕ್ಕೆ ಇಳಿದಿದೆ. ಉದಯನಿಧಿ ಹೀಗೆಯೇ ಮುಂದುವರಿದರೆ, ‘I.N.D.I.A’  ಮೈತ್ರಿಕೂಟದ ಮತಗಳು ಶೇಕಡಾ 20 ರಷ್ಟು ಕಡಿಮೆಯಾಗುತ್ತವೆ ಅಂತಾ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನರನ್ನ ಹೊಡೆಯೋದು ಬಿಜೆಪಿಯವರ ಉದ್ದೇಶ-ದಿನೇಶ್ ಗುಂಡೂರಾವ್