Webdunia - Bharat's app for daily news and videos

Install App

ಕೆಪಿಸಿಸಿ ಗೆ ಶೀಘ್ರದಲ್ಲಿಯೇ ನೂತನ ಅಧ್ಯಕ್ಷರನ್ನು ನೇಮಕ ಮಾಡಿ-ಸೋನಿಯಾಗೆ ಪರಮೇಶ್ವರ್ ಮನವಿ

Webdunia
ಸೋಮವಾರ, 20 ಜನವರಿ 2020 (09:59 IST)
ಬೆಂಗಳೂರು : ಕೆಪಿಸಿಸಿ ಗೆ ಶೀಘ್ರದಲ್ಲಿಯೇ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಂದು ಅಧ್ಯಕ್ಷೆ ಸೋನಿಯಾ ಗಾಂಧಿಗೆ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.



ಈ ಬಗ್ಗೆ ಇಮೇಲ್ ಮೂಲಕ ಮನವಿ ಮಾಡಿರುವ ಪರಮೇಶ್ವರ್, 2013ರ ಮಾದರಿಯಲ್ಲಿ ಕಾಂಗ್ರೆಸ್ ಪುನರುತ್ಥಾನ ಮಾಡಬೇಕು. ಹೀಗಾಗಿ ಸಾಮಾಜಿಕ ನ್ಯಾಯ ಪರಿಗಣಿಸಿ ಅಧ್ಯಕ್ಷರನ್ನ ನೇಮಿಸಿ. ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಅವಶ್ಯಕತೆ ಸದ್ಯಕ್ಕಿಲ್ಲ. ಖರ್ಗೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.


ಎಸ್.ಆರ್.ಪಾಟೀಲ್ ಬೆಳಗಾವಿ ಕರ್ನಾಟಕ ಪ್ರತಿನಿಧಿಸುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಮೈಸೂರು ಭಾಗವನ್ನು ಪ್ರತಿನಿಧಿಸುತ್ತಿದ್ದಾರೆ. ಡಿಕೆಶಿ ಅಧ್ಯಕ್ಷರಾದ್ರೆ ಬೆಂಗಳೂರು ವಿಭಾಗದವರಾಗುತ್ತಾರೆ .

ಹೀಗಾಗಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಗೊಂದಲಬೇಡ. ಜಾತಿ ಆಧಾರದ ಮೇಲೆ ಕೆಪಿಸಿಸಿಗೆ ಅಧ್ಯಕ್ಷರ ಆಯ್ಕೆ ಬೇಡ ಎಂದು ಇಮೇಲ್ ಮೂಲಕ ಸೋನಿಯಾಗೆ ಮನವಿ ಮಾಡಿದ ಪರಮೇಶ್ವರ್ ಅವರು, ಮಲ್ಲಿಕಾರ್ಜುನ ಖರ್ಗೆ, ಬಿಕೆ ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಸಲಹೆಯನ್ನು ಕೂಡ  ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments