Publish Date: Sat, 05 Jan 2019 (19:54 IST)
Updated Date: Sat, 05 Jan 2019 (19:55 IST)
ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ ಬೋಧನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ನಿರ್ಧಾರಕ್ಕೆ ಡಿಸಿಎಂ ಸಹಮತ ವ್ಯಕ್ತಪಡಿಸಿದ್ದಾರೆ.
ಸಿಎಂ ನಿರ್ಧಾರಕ್ಕೆ ನಾನು ಬದ್ದನಾಗಿದ್ದೇನೆ ಎಂದು ತುಮಕೂರಿನಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ರಾಜ್ಯಮಟ್ಟದ ಸಿರಿಧಾನ್ಯ ಮೇಳ ಉದ್ಘಾಟಿಸಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ಸರಕಾರಿ ಶಾಲೆಯಲ್ಲಿ ಇಂಗ್ಲಿಷ್ ಬೋಧನೆ ವಿಷಯಕ್ಕೆ ತೆಗೆದುಕೊಂಡ ಸಿಎಂ ನಿರ್ಧಾರ ಸರಿಯಾಗಿದೆ ಎಂದಿದ್ದಾರೆ.
ಇನ್ನು ವಿಧಾನಸೌಧದಲ್ಲಿ ಹಣ ಸಿಕ್ಕ ವಿಚಾರದ ಕುರಿತು ಮಾತನಾಡಿ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣವಾದ ಬಳಿಕ ಪೊಲೀಸರು ಕ್ರಮಕೈಗೊಳ್ಳುತ್ತಾರೆ ಎಂದರು.