Webdunia - Bharat's app for daily news and videos

Install App

ಪರಮೇಶ್ವರ್ ಸಿಎಂ ಆಗಲೇಬೇಕು: ದಲಿತ ಮುಖಂಡರ ಒತ್ತಾಯ

Webdunia
ಮಂಗಳವಾರ, 17 ಫೆಬ್ರವರಿ 2015 (12:43 IST)
ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಪರಮೇಶ್ವರ್ ಅವರ ಅಭಿಮಾನಿಗಳು ಸಂಚಲನವನ್ನುಂಟು ಮಾಡಲು ಮುಂದಾಗಿದ್ದು, ಡಾ.ಜಿ.ಪರಮೇಶ್ವರ್ ಅವರು ರಾಜ್ಯದ ಸಿಎಂ ಆಗಲೇಬೇಕೆಂದು ಪಟ್ಟು ಹಿಡಿದ್ದಾರೆ. 
 
ರಾಜ್ಯದ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಇಂದು ನಗರದ ಏಟ್ರಿಯಾ ಹೋಟೆಲ್‌ನಲ್ಲಿ ಸಭೆ ಸೇರಿದ್ದು, ಸಭೆಯಲ್ಲಿ ದಲಿತ ಸಮುದಾಯದ ಕಾಂಗ್ರೆಸ್ ಮುಖಂಡ ಡಾ.ಜಿ ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಲು ಕಾಂಗ್ರೆಸ್ ಸರ್ಕಾರ ಅವಕಾಶ ನೀಡಬೇಕು. ಅಲ್ಲದೆ ಪಕ್ಷದಲ್ಲಿ ಉನ್ನತ ಪದವಿಯಲ್ಲಿರುವ ಅವರು ಸಿಎಂ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಕೂಡಲೇ ತಮ್ಮ ಅಧಿಕೃತ ನಿರ್ಧಾರವನ್ನು ಪ್ರಕಟಿಸಬೇಕು. ಅಲ್ಲದೆ ಸಿಎಂ ಅವರನ್ನು ಒತ್ತಾಯಿಸಬೇಕೆಂದು  ನಿರ್ಧಾರ ಕೈಗೊಂಡರು.  
 
ಇನ್ನು ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಮುಖಂಡರು, ಈ ಬಗ್ಗೆ ಸಿಎಂ ಸಿದ್ದಾಮಯ್ಯ ಅವರನ್ನು ಇಂದು ಮಧ್ಯಾಹ್ನ ಭೇಟಿ ಮಾಡಲಿದ್ದು, ಅವರಿಗೆ ಮನವಿ ಮೂಲಕ ಒತ್ತಾಯಿಸಲಿದ್ದೇವೆ. ಸರ್ಕಾರ ಈ ಬಗ್ಗೆ ಕೂಡಲೇ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದಲ್ಲಿ ಸರ್ಕಾರದಲ್ಲಿನ ದಲಿತ ಸಚಿವರ ರಾಜೀನಾಮೆ ಪರ್ವ ಆರಂಭವಾಗಲಿದೆ ಎಂಬ ಎಚ್ಚರಿಕೆಯನ್ನು ರವಾನಿಸಿದರು. 
 
ಇನ್ನು ಪರಮೇಶ್ವರ್ ಇಂದು ಮಧ್ಯಾಹ್ನ 12.30ಕ್ಕೆ ದಲಿತ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments