ಪರಮೇಶ್ವರ್ ಗೆ ಸಿಎಂ ಸ್ಥಾನ: ಸಂಸದ ಉಗ್ರಪ್ಪ ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 18 ನವೆಂಬರ್ 2018 (15:02 IST)
ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಗೆ  ಸಿಎಂ ಸ್ಥಾನ ಲಭ್ಯವಾಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಸಂಸದ ವಿ.ಎಸ್.ಉಗ್ರಪ್ಪ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ.

ಪರಮೇಶ್ವರ್ ರವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ವಿದ್ಯಾರ್ಹತೆ, ಸಾಮರ್ಥ್ಯವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ  ಪಾರ್ಟಿ ಮತ್ತು ಶಾಸಕರು ಅದರಲ್ಲೂ ಸಮ್ಮಿಶ್ರ ಆಗುವಂತಹ ಸಂದರ್ಭದಲ್ಲಿ ಖಂಡಿತಾ ಅವಕಾಶವಿದೆ.

ಅವರು ಮುಖ್ಯಮಂತ್ರಿ ಯಾದ್ರೆ ಖುಷಿಪಡೋದ್ರಲ್ಲಿ ನಾನು ಮೊದಲಿಗನಾಗುತ್ತೇನೆ. ಯಾಕಂದ್ರೆ ತುಮಕೂರು‌ ಜಿಲ್ಲೆಗೆ ಮುಖ್ಯ ಮಂತ್ರಿ ಸ್ಥಾನ ಲಭ್ಯನೇ ಆಗಿಲ್ಲ. ಪರಮೇಶ್ವರ್ ಅವರ ಮೂಲಕ ಲಭ್ಯವಾಗುತ್ತೆ ಅಂದ್ರೆ ನಾವೆಲ್ಲರೂ ಖುಷಿ ಪಡೋ ಅಂತಾ ವಿಚಾರ ಎಂದರು.  

ಪರಮೇಶ್ವರ್ ಅವರಿಗೆ ಅರ್ಹತೆ ಇದೆ, ಸೀನಿಯರ್ ಇದ್ದಾರೆ, ಪಕ್ಷದ ಅಧ್ಯಕ್ಷರಾಗಿದ್ದಾರೆ. ಆ ತರಹ ಅರ್ಹತೆ ಇರೋರು ಅನೇಕ ಜನರು ನಮ್ಮ ಪಕ್ಷದಲ್ಲಿದ್ದಾರೆ. ಮುಖ್ಯಮಂತ್ರಿ ಯಾಗುವಂತ ಅರ್ಹತೆ ಇರೋರು ಮಲ್ಲಿಕಾರ್ಜುನ್ ಖರ್ಗೆ ಸಾಹೆಬ್ರು ಇದ್ದಾರೆ. ಎರಡನೇ ಬಾರಿಗೆ ಸಿದ್ದರಾಮಯ್ಯನವರು ಸಿಎಂ ಆಗುವ ಅವಕಾಶಗಳಿವೆ.

ಡಿ.ಕೆ. ಶಿವಕುಮಾರ್, ಆರ್. ವಿ. ದೇಶಪಾಂಡೆ, ಹೆಚ್. ಕೆ. ಪಾಟೀಲ್ ಹೀಗೆ ಅನೇಕ ಜನ ಅರ್ಹತೆ ಇರತಕ್ಕಂತಹವರು ಇದ್ದಾರೆ ಎಂದಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ಮತ್ತು ಶಾಸಕರು ತೀರ್ಮಾನ ಮಾಡುತ್ತಾರೆ ಎಂದು ತುಮಕೂರಿನ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಬಳ್ಳಾರಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments