Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ಅಕ್ರಮ ತನಿಖಾಧಿಕಾರಿಯಾಗಿ ಮುರುಗನ್ ನೇಮಕ

Webdunia
ಶನಿವಾರ, 29 ಜನವರಿ 2022 (17:37 IST)
ಪರಪ್ಪನ ಅಗ್ರಹಾರ ಜೈಲು ಭೇಟಿ ಮುಗಿಸಿ ಹೈಕೋರ್ಟ್ ನ್ಯಾಯಧೀಶರು ವಾಪಸ್ ಹೊರಟಿದ್ದಾರೆ. ನ್ಯಾಯಾಧೀಶ ವೀರಪ್ಪ ಮತ್ತು ದಿನೇಶ್ ಕುಮಾರ್ ದಿಢೀರ್ ಭೇಟಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲು ಭೇಟಿ ಮುಗಿಸಿ ಹೈಕೋರ್ಟ್ ನ್ಯಾಯಧೀಶರು ವಾಪಸ್ ಹೊರಟಿದ್ದಾರೆ. ನ್ಯಾಯಾಧೀಶ ವೀರಪ್ಪ ಮತ್ತು ದಿನೇಶ್ ಕುಮಾರ್ ದಿಢೀರ್ ಭೇಟಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ವರದಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಲಾಗಿದೆ. ಭೇಟಿ ವೇಳೆ ಯಾವುದೇ ಅಕ್ರಮ‌ ಕಂಡು ಬಂದಿಲ್ಲ. ಜೈಲಿನಲ್ಲಿ ವ್ಯವಸ್ಥೆಯಲ್ಲಿ ಲೋಪಗಳು ಕಾಣಲಿಲ್ಲ. ಪುರುಷ ಮತ್ತು ಮಹಿಳಾ ಖೈದಿಗಳ ಬ್ಯಾರಕ್ ಭೇಟಿ ನೀಡಲಾಗಿದೆ. ಅಡುಗೆ ಮನೆಗೆ ಸಹ ಭೇಟಿ ನೀಡಿ ಆಹಾರ ರುಚಿ ಪರಿಶೀಲನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
 
ಆಹಾರದ ಗುಣಮಟ್ಟ ಸಹ ಉತ್ತಮವಾಗಿದೆ. ಕೈದಿಗಳ ಜೊತೆ ಮುಕ್ತವಾಗಿ ಚರ್ಚೆ ಮಾಡಲಾಗಿದೆ. ಈ ವೇಳೆ ಯಾವುದೇ ಗುರುತರ ಆರೋಪ ಮಾಡಿಲ್ಲ. ಆದ್ರೆ ಜೈಲಿನ ಧೋರಣೆ ಬಗ್ಗೆ ಕೆಲ ಕೈದಿಗಳಿಂದ ದೂರು ಕೇಳಿಬಂದಿದೆ. ತಪ್ಪು ಮಾಡಿ ಬಂದಿರುವ ಕೈದಿಗಳಿಗೆ ಅಂತಹ ಧೋರಣೆ ಸಾಮಾನ್ಯ. ಕೊಲೆಗಡುಕ ವಾಲ್ಮೀಕಿ ರಾಮಾಯಣ ಬರೆದಿದ್ದಾನೆ. ಕೃಷ್ಣನ ಜನ್ಮ ಸ್ಥಳ ಸಹ ಜೈಲಾಗಿದೆ. ಮೈಕ್ ಮೂಲಕ ಜೈಲು ಬಂಧಿಗಳ ಹಕ್ಕು ಬಗ್ಗೆ ಅರಿವು ಮೂಡಿಸಲಾಯಿತು. ಸದ್ಯ ಈಗಲೇ ಕ್ಲೀನ್ ಚಿಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
 
ಮತ್ತೆ ಹಲವು ಬಾರಿ ಇದೇ ರೀತಿ ಜೈಲಿಗೆ ಅನಿರೀಕ್ಷಿತ ಭೇಟಿ ನೀಡ್ತೇವೆ. ಜೈಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. 9 ರಿಂದ 10 ವರ್ಷ ಜೈಲು ವಾಸ ಅನುಭವಿಸಿದರ ಪಟ್ಟಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಿ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇವೆ. ಜೈಲು ಭೇಟಿ ವಿಷಯ ಮೊದಲೇ ತಿಳಿದಿರುವ ಸಾಧ್ಯತೆ ಇದೆ. ಅಕ್ರಮದ ಬಗ್ಗೆ ಮಾಹಿತಿ ಸಿಕ್ಕರೆ ಕಾನೂನು ಪ್ರಾಧಿಕಾರದಿಂದ ಕ್ರಮ ಕೈಗೊಳ್ಳುತ್ತೇವೆ ಎಂದು ಹೈಕೋರ್ಟ್ ಜಡ್ಜ್ ವೀರಪ್ಪ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments