ಪರೇಶ ಮೇಸ್ತ್ ಪ್ರಕರಣ: ಶೀಘ್ರ ತನಿಖೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Webdunia
ಮಂಗಳವಾರ, 10 ಜುಲೈ 2018 (18:17 IST)
ಹೊನ್ನಾವರ ಪಟ್ಟಣದ ಯುವಕ ಪರೇಶ್ ಮೇಸ್ತನ ಅನುಮಾನಾಸ್ಪದ ಸಾವಿನ ಪ್ರಕರಣದ ಶೀಘ್ರ ತನಿಖೆಗೆ ಒತ್ತಾಯಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ತೆಂಗೇರಿ ನೇತೃತ್ವದಲ್ಲಿ ಇಲ್ಲಿನ ಶರಾವತಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡರು.
ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿಬಿಐಗೆ ಪರೇಶ್ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದರೆ ವಾರದಲ್ಲಿ ನ್ಯಾಯ ಕೊಡಿಸುವುದಾಗಿ ಬಿಜೆಪಿ ಮುಖಂಡರು ಭರವಸೆ ನೀಡಿದ್ದರು. ಆದರೀಗ ಏಳು ತಿಂಗಳು ಕಳೆದರೂ ಈ ಕುರಿತು ಸೊಲ್ಲೆತ್ತುತ್ತಿಲ್ಲ. ಇದನ್ನು ಖಂಡಿಸಿ ಹೋರಾಟ ನಡೆಸುತ್ತಿದ್ದೇವೆ ಎಂದು ಈ ವೇಳೆ ಅವರು ತಿಳಿಸಿದರು‌. ಸಚಿವ ಆರ್.ವಿ.ದೇಶಪಾಂಡೆ, ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತು ಸಾರ್ವಜನಿಕರ ಒತ್ತಾಯದ ಮೇರೆಗೆ ಅಂದಿನ ಸಿದ್ದರಾಮಯ್ಯ ನೃತೃತ್ವದ ಕಾಂಗ್ರೆಸ್ ಸರಕಾರ ಘಟನೆ ನಡೆದ ಐದೇ ದಿನದಲ್ಲಿ ಈ ಪ್ರಕರಣವನ್ನು ಸಿಬಿಐಗೆ ನೀಡಿದೆ. ಆದರೆ ಜಿಲ್ಲೆಯವರೇ ಆಗಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯ ವರು ಶೀಘ್ರ ತನಿಖೆಗೆ ಒತ್ತಾಯಿಸದೇ, ಮುಂದಿನ ಲೋಕಸಭಾ ಚುನಾವಣೆಯ ವರೆಗೂ ಸಾವಿನ ನಿಗೂಢತೆಯನ್ನು ಜೀವಂತ ವಾಗಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರ. ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಪಡೆದ ರಾಜಕೀಯ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆದುಕೊಳ್ಳಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಉಪವಾಸ ಸತ್ಯಾಗ್ರಹದ ಬಳಿಕ 15 ದಿನದಲ್ಲಿ ನಮ್ಮ ಬೇಡಿಕೆಗೆ ಸಂಬಂಧಿತರು ಸ್ಪಂದಿಸದಿದ್ದಲ್ಲಿ "ಹೊನ್ನಾವರ ಬಂದ್"ಆಚರಿಸಿ ಕೇಂದ್ರದ ಸಿಬಿಐ ಮೇಲೆ ಒತ್ತಡ ಹೇರಲಾಗುವುದು.ಅದಕ್ಕೂ ಮಣಿಯದಿದ್ದಲ್ಲಿ ಪಾದಯಾತ್ರೆಯ ಮೂಲಕ "ಕಾರವಾರ ಚಲೋ" ಹಮ್ಮಿಕೊಂಡು ನ್ಯಾಯ ಸಿಗುವವರೆಗೂ ನಿರಂತರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಮೊದಲು ನನ್ನ ಮತ್ತು ನಿಮ್ಮ ಅನುಭವದ ಬಗ್ಗೆ ಮಾತನಾಡೋಣ: ಎಚ್ ಡಿ ಕುಮಾರಸ್ವಾಮಿ ಡಿಚ್ಚಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದರ್ಶನ ಬಲು ದುಬಾರಿ: ಹಿಂದೂಗಳ ಮೇಲೆ ಯಾಕಿಷ್ಟು ಧ್ವೇಷ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments