Webdunia - Bharat's app for daily news and videos

Install App

ಕೊರೊನಾ ಹೊಸ ತಳಿ ಪತ್ತೆಯಿಂದ ಪೋಷಕರು ಪುಲ್ ಟೆನ್ಷನ್

Webdunia
ಮಂಗಳವಾರ, 30 ನವೆಂಬರ್ 2021 (20:37 IST)
ಮಹಾಮಾರಿ ಕೊರೊನಾ 3ನೇ ಅಲೆ ಜೊತೆಗೆ ಒಮಿಕ್ರೋನ್ ಜನರನ್ನು ಆತಂಕದಲ್ಲಿ ಮುಳುಗುವಂತೆ ಮಾಡಿದೆ. ಅದರಲ್ಲೂ ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಕೊರೊನಾ ಪತ್ತೆಯಾಗುತ್ತಿರುವುದು ದುಪ್ಪಟ್ಟು ಆತಂಕ ಹೆಚ್ಚಿಸಿದೆ. ಕೊರೊನಾ ಹೊಸ ತಳಿ ಪತ್ತೆಯಿಂದ ಪೋಷಕರು ಪುಲ್ ಟೆನ್ಷನ್ ಆಗಿದ್ದಾರೆ.
 
ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಪೋಷಕರಲ್ಲಿ ಹೆಚ್ಚಿದ ಆತಂಕ ಉಂಟಾಗಿದೆ. ರಾಜ್ಯದ ಎಲ್ಲಾ ಕಡೆ ಅಂಗನವಾಡಿಯಿಂದ ಕಾಲೇಜ್ ವರೆಗೂ ಶಾಲಾ ಕಾಲೇಜು ಆರಂಭವಾಗಿದೆ. ಮಕ್ಕಳು ಕಳೆದ ಎರಡು ತಿಂಗಳಿನಿಂದ ಶಾಲೆಗೆ ಹೋಗುತ್ತಾ ಇದ್ದಾರೆ. ಆದ್ರೆ ಈಗ ಮತ್ತೆ ಹೊಸ ತಳಿ ಪತ್ತೆಯಿಂದ ಪೋಷಕರು ಶಾಲೆಗೆ ಮಕ್ಕಳನ್ನ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ. ಮಕ್ಕಳಿಗೆ ವ್ಯಾಕ್ಸಿನ್ ಆಗಿಲ್ಲ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಪೋಷಕರ ಆತಂಕ ಏನು?
ಮಕ್ಕಳಿಗೇ ಮೂರನೇ ಅಲೆ ಬರುತ್ತೆ ಅನ್ನೊ ಭಯದಲ್ಲಿ ಸದ್ಯ ಪೋಷಕರು ದಿನ ಕಳೆಯುತ್ತಿದ್ದಾರೆ. ಅಲ್ಲದೆ ಮಕ್ಕಳಿಗೆ ಇನ್ನು ವ್ಯಾಕ್ಸಿನ್ ಲಭ್ಯವಾಗಿಲ್ಲ, ಇದರಿಂದ ಮಕ್ಕಳು ಅಪಾಯದಲ್ಲಿದ್ದಾರೆ. ಸದ್ಯದ ವಾತಾವರಣದಿಂದ ಮಕ್ಕಳಲ್ಲಿ ವೈರಲ್ ಜ್ವರ, ನೆಗಡಿ, ಕೆಮ್ಮು ಕಿರಿಕಿರಿ ಇದೆ. ಮಕ್ಕಳಿಂದ ಮನೆ ಮನೆಗೂ ಕೊರೊನಾ ಹರಡುವ ಆತಂಕ ಇದೆ. ಅಲ್ಲದೆ ಮಕ್ಕಳಿಗೆ ಕೊರೊನಾ ಮಾರ್ಗಸೂಚಿ ಪಾಲನೆ ಕಷ್ಟ. ಶಾಲೆಯಲ್ಲಿ ಒಂದು ಮಗುವಿಗೆ ಕೊರೊನಾ ಬಂದ್ರು ಕಂಪ್ಲೀಟ್ ಶಾಲೆ ಮಕ್ಕಳಿಗೆ ಹರಡುವ ಭಯ ಇದೆ. ಮಕ್ಕಳಿಲ್ಲಿ ಸದ್ಯ ವೈರಲ್ ಇನ್ಫೆಕ್ಷನ್, ಡೆಂಘೀ ಜ್ವರ ಕಾಣಿಸಿಕೊಳ್ಳುತ್ತಿದೆ. ಮಕ್ಕಳು ಶಾಲೆಯಲ್ಲಿ ಮಾಸ್ಕ್ ಸರಿಯಾಗಿ ಹಾಕಲ್ಲ, ಸಾಮಾಜಿಕ ಅಂತರ ಕಷ್ಟ ಎಂಬುವುದು ಪೋಷಕರನ್ನು ಕಾಡುತ್ತಿರುವ ಭಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments