ಅಪ್ರಾಪ್ತ ಮಕ್ಕಳಿಗೆ ಬೈಕ್ ಓಡಿಸಲು ಕೊಡ್ತೀರಾ, ಹಾಗಿದ್ದರೆ ಈ ಸ್ಟೋರಿ ತಪ್ಪದೇ ನೋಡಿ

Krishnaveni K
ಶನಿವಾರ, 14 ಡಿಸೆಂಬರ್ 2024 (16:34 IST)
ಹಾವೇರಿ: ಇತ್ತೀಚೆಗಿನ ದಿನಗಳಲ್ಲಿ ಶಾಲೆಗೆ ಹೋಗುವ ಮಕ್ಕಳೆಲ್ಲಾ ಸ್ಕೂಟಿ ಬಿಟ್ಟುಕೊಂಡು ರಸ್ತೆಯಲ್ಲಿ ಓಡಾಡುವುದನ್ನು ಗಮನಿಸುತ್ತೇವೆ. ಆದರೆ ಅಂತಹ ಮಕ್ಕಳ ಪೋಷಕರು ಇದನ್ನು ತಪ್ಪದೇ ಗಮನಿಸಬೇಕು.

ಅಪ್ರಾಪ್ತ ಮಕ್ಕಳ ಕೈಯಲ್ಲಿ ವಾಹನ ನೀಡಬಾರದು ಎಂದು ನಿಯಮವಿದೆ. 18 ವರ್ಷದ ಬಳಿಕ ಪರವಾನಗಿ ಪಡೆದೇ ವಾಹನ ಓಡಿಸಬೇಕು. ಆದರೆ ಎಷ್ಟೋ ಪೋಷಕರೇ ತಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಓಡಿಸಲು ಅವಕಾಶ ಕೊಡುತ್ತಾರೆ. ಆದರೆ ಇದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.

ಇದೀಗ ರಾಣೆಬೆನ್ನೂರಿನಲ್ಲಿ ಇಂತಹದ್ದೇ ತಪ್ಪು ಮಾಡಿದ ಪೋಷಕರೊಬ್ಬರು ಬರೋಬ್ಬರಿ 27, 000 ರೂ. ದಂಡ ತೆರಬೇಕಾಗಿ ಬಂದಿದೆ. ದಿಳ್ಳೆಪ್ಪ ಕಾಟಿ ಎಂಬವರು ತಮ್ಮ ಅಪ್ರಾಪ್ತ ಮಗನಿಗೆ ಬೈಕ್ ಓಡಿಸಲು ಕೊಟ್ಟಿದ್ದರು. ಆದರೆ ಆತ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಪ್ರಕರಣ ದಾಖಲಾಯಿತು.

ಈ ಸಂಬಂಧ ಕೋರ್ಟ್ ನಲ್ಲಿ ವಿಚಾರಣೇ ನಡೆಯಿತು. ಈ ವೇಳೆ ವಿವರ ತಿಳಿದುಕೊಂಡ ನ್ಯಾಯಾಧೀಶರು ದಿಳ್ಳೆಪ್ಪ ಕಾಟಿಗೆ 27 ಸಾವಿರ ರೂ. ದಂಡ ತೆರಲು ಸೂಚಿಸಿದೆ. ಜೊತೆಗೆ ಅಪ್ರಾಪ್ತ ಮಗನಿಗೆ ವಾಹನ ನೀಡದಂತೆ ಎಚ್ಚರಿಕೆಯನ್ನೂ ನೀಡಿದೆ.  ಅಪ್ರಾಪ್ತರಿಗೆ ವಾಹನ ನೀಡುವ ಎಷ್ಟೋ ಪೋಷಕರಿಗೆ ಇದು ಪಾಠವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments