Webdunia - Bharat's app for daily news and videos

Install App

ಸಂಸತ್ ಬಜೆಟ್ ಅಧಿವೇಶನ: ಕೊರೋನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್

Webdunia
ಸೋಮವಾರ, 31 ಜನವರಿ 2022 (20:58 IST)
ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದಾರೆ.
ತಮ್ಮ ಕರ್ತವ್ಯಗಳಿಗೆ ಮೊದಲ ಆದ್ಯತೆ ನೀಡಿ, ಭಾರತದ ಹಕ್ಕುಗಳನ್ನು ಪಡೆಯಲು ಸಹಾಯ ಮಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ತಲೆಬಾಗುತ್ತೇನೆ. 75 ವರ್ಷಗಳಲ್ಲಿ ಭಾರತದ ಅಭಿವೃದ್ಧಿಯ ಹಾದಿಗೆ ಸಹಕರಿಸಿದ, ಕೊಡುಗೆ ನೀಡಿದ ಎಲ್ಲರಿಗೂ ನಾನು ಗೌರವಿಂದ ಸ್ಮರಿಸುತ್ತೇನೆ ಎಂದಿದ್ದಾರೆ. ಈ ವರ್ಷದಿಂದ ಕೇಂದ್ರ ಸರ್ಕಾರ ನೇತಾಜಿಯವರ ಜನ್ಮದಿನ ಜ.23 ರಿಂದ ಗಣರಾಜ್ಯೋತ್ಸವ ಆಚರಣೆ ಆರಂಭಿಸಿದೆ. ದೇಶದ ಸುರಕ್ಷಿತ ಭವಿಷ್ಯಕ್ಕಾಗಿ ಇತಿಹಾಸ ನೆನಪಿನಲ್ಲಿ ಇಡುವುದು ಮುಖ್ಯ. ಇದನ್ನು ನೋಡಿ ಕಲಿಯುವುದು ಬಹಳಷ್ಟಿದೆ ಎಂದು ನಮ್ಮ ಸರ್ಕಾರ ನಂಬುತ್ತದೆ ಎಂದಿದ್ದಾರೆ.
ಕೋವಿಡ್-19  ಸಾಂಕ್ರಾಮಿಕ ರೋಗದ ಅವಧಿಯಲ್ಲಿ ಮೋದಿ ಸರ್ಕಾರ ಅದನ್ನು ನಿಭಾಯಿಸಿದ ಪರಿಯನ್ನು ರಾಷ್ಟ್ರಪತಿಗಳು ಶ್ಲಾಘಿಸಿದ್ದಾರೆ. ಲಸಿಕೆಗಳು ಇಲ್ಲಿ ಮುಖ್ಯ ಪಾತ್ರ ವಹಿಸಿವೆ, ಕೋಟ್ಯಂತರ ಜನರ ಜೀವ ಉಳಿಸಲು ಲಸಿಕೆ ಸಹಾಯ ಮಾಡಿವೆ. ಇದರ ಜತೆಗೆ ನಮ್ಮ ದೇಶದ ಎಲ್ಲ ಕೋವಿಡ್ ವಾರಿಯರ‍್ಸ್ ತಮ್ಮ ಪ್ರಾಣ ಲೆಕ್ಕಿಸದೇ ಜನರ ಜೀವ ಉಳಿಸಲು ಸಹಕರಿಸಿದ್ದಾರೆ ಇವರಿಗೂ ನನ್ನ ಅಭಿನಂದನೆಗಳು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments