Webdunia - Bharat's app for daily news and videos

Install App

ವಕ್ಫ್ ವಿವಾದಕ್ಕೆ ಕೇಂದ್ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷರ ಎಂಟ್ರಿ

Krishnaveni K
ಮಂಗಳವಾರ, 5 ನವೆಂಬರ್ 2024 (18:13 IST)
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸದ್ದು ಮಾಡುತ್ತಿರುವ ವಕ್ಫ್ ವಿವಾದಕ್ಕೆ ಈಗ ಕೇಂದ್ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷರ ಎಂಟ್ರಿಯಾಗಲಿದೆ. ಈಗಾಗಲೇ  ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದರು. ಇದೀಗ ಪಕ್ಕಾ ಆಗಿದೆ.

ವಕ್ಫ್ ಆಸ್ತಿ ಎಂದು ರಾಜ್ಯದ ಹಲವು ಜಿಲ್ಲೆಗಳ ರೈತರಿಗೆ ನೋಟಿಸ್ ನೀಡಲಾಗಿದೆ. ಈ ವಿಚಾರವಾಗಿ ರಾಜ್ಯ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. ಹಲವು ರೈತರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ರೈತರ ಜಮೀನುಗಳು, ಕೆಲವು ಮಠ, ಮಂದಿರಗಳು, ಐತಿಹಾಸಿಕ ಸ್ಥಳಗಳನ್ನೂ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿರುವುದು ಬೆಳಿಗೆ ಬಂದ ಬೆನ್ನಲ್ಲೇ ಈಗ ಕೇಂದ್ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ನವಂಬರ್ 7 ರಂದು ಕರ್ನಾಟಕಕ್ಕೆ ಆಗಮಿಸಲಿರುವ ಜಗದಾಂಬಿಕಾ ಪಾಲ್ ರೈತರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ವಕ್ಫ್ ಮಸೂದೆ ತಿದ್ದುಪಡಿ ಸಂಬಂಧ ಕೇಂದ್ರ ಸರ್ಕಾರ ಪರಾಮರ್ಶೆ ನಡೆಸಲು ಸಂಸದೀಯ ಸಮಿತಿ ರಚಿಸಿತ್ತು. ಇದೀಗ ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದಿರುವಾಗ ಜಗದಾಂಬಿಕಾ ಪಾಲ್ ಆಗಮಿಸುತ್ತಿರುವುದು ಮಹತ್ವ ಪಡೆದಿದೆ.

ಈ ಮೊದಲು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಜಗದಾಂಬಿಕಾ ಪಾಲ್ ಗೆ ರಾಜ್ಯಕ್ಕೆ ಬರಲು ಮನವಿ ಮಾಡಿ ಪತ್ರ ಬರೆದಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ರೈತರು ಅಹವಾಲುಗಳನ್ನು ನೀಡುವುದರ ಜೊತೆಗೆ ತಮ್ಮ ಸಮಸ್ಯೆಗಳನ್ನು ಜಗದಾಂಬಿಕಾ ಪಾಲ್ ಬಳಿ ವಿವರಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments